ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹೃದಯಾಘಾತ ಪ್ರಕರಣ ಹೃದಯಾಘಾತ ತಡೆಗಟ್ಟಲು ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆ ಕಲ್ಪಿಸಿ – ಡಾ.ಧನಂಜಯ ಸರ್ಜಿ
ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹೃದಯಾಘಾತ ಪ್ರಕರಣ ಹೃದಯಾಘಾತ ತಡೆಗಟ್ಟಲು ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆ ಕಲ್ಪಿಸಿ – ಡಾ.ಧನಂಜಯ ಸರ್ಜಿ ಬೆಂಗಳೂರು : ಹೃದಯಾಘಾತವಾದಂತಹ ಸಂಧರ್ಭದಲ್ಲಿ ಇ.ಸಿ.ಜಿ ಪರೀಕ್ಷೆ ಮಾಡಲಾಗುತ್ತದೆ. ಆದರೆ ಇ.ಸಿ.ಜಿ ಪರೀಕ್ಷೆಯಿಂದ ಸ್ಪಷ್ಟವಾಗಿ ದೃಢವಾಗುವುದಿಲ್ಲ, ಹೃದಯ ಸಂಬಂಧಿ ಕಾಯಿಲೆ ಇದ್ದು ಧೂಮಪಾನದ ಅಭ್ಯಾಸವಿದ್ದರೆ ಟಿ.ಎಂ.ಟಿ ಮಾಡಬೇಕು ಆದರೆ ರಾಜ್ಯದ ಯಾವ ತಾಲೂಕು ಆಸ್ಪತ್ರೆಯಲ್ಲೂ ಟಿ.ಎಂ.ಟಿ ವ್ಯವಸ್ಥೆ ಇಲ್ಲ. ಹೃದಯಾಘಾತದ ಲಕ್ಷಣ ಮತ್ತು ಹೃದಯ ಸಂಬಂಧಿ ಕಾಯಿಲೆಗಳನ್ನೂ ಗುರುತಿಸುವುದಕ್ಕೆ ಟ್ರೋಪೋನಿನ್ ಐ ಪರೀಕ್ಷೆ ಮಾಡಲಾಗುತ್ತದೆ ಆದರೆ…