ಡಿಕೆಶಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆಯಿಂದ ಮಾತನಾಡಲಿ; ಆರ್. ಮೋಹನ್*
*ಡಿಕೆಶಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆಯಿಂದ ಮಾತನಾಡಲಿ; ಆರ್. ಮೋಹನ್* ಶಿವಮೊಗ್ಗ: ಹಿರಿಯ, ಅನುಭವಿ ಹಾಗೂ ಮುತ್ಸದ್ದಿ ರಾಜಕಾರಣಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ದ ಮಾತನಾಡುವಾಗ ಜಾ.ದಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ವಹಿಸಬೇಕು. ದೊಡ್ಡವರನ್ನು ಟೀಕಿಸಿದ ಮಾತ್ರಕ್ಕೆ ತಾನು ದೊಡ್ಡವನಾಗುತ್ತೇನೆ ಎಂಬ ಭ್ರಮೆ ಬಿಡಬೇಕು. ಇಲ್ಲದಿದ್ದಲ್ಲಿ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ, ಕೆಪಿಸಿಸಿ ಸಂಯೋಜಕ ಆರ್. ಮೋಹನ್ ಕಿಡಿ ಕಾರಿದ್ದಾರೆ….


