ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠ ನಿಧನ; ಸಿಎಂ ಸಿದ್ದರಾಮಯ್ಯ ಸಂತಾಪ*
*ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠ ನಿಧನ; ಸಿಎಂ ಸಿದ್ದರಾಮಯ್ಯ ಸಂತಾಪ* ಧಾರವಾಡ ಕನ್ನಡ ವಾಙ್ಮಯ ವಿಹಾರದಲ್ಲಿ ಕವಿ, ಕಥೆಗಾರ, ಪ್ರಬಂಧಕಾರ, ವಿಮರ್ಶಕ, ಅನುವಾದಕ, ಸಂಪಾದಕ ಮತ್ತು ವಾಗ್ಮಿಯಾಗಿ ಗುರುತಿಸಿಕೊಂಡು ವಿಶಿಷ್ಟ ಸಾಧನೆ ಮಾಡಿದ್ದ ಹಿರಿಯ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠ (92) ಅವರು ಶುಕ್ರವಾರ (ಮಾರ್ಚ್ 14 ರಂದು) ಧಾರವಾಡದಲ್ಲಿ ವಿಧಿವಶರಾದರು. ಕೊಪ್ಪಳ ಜಿಲ್ಲೆ ಬಿಸರಹಳ್ಳಿಯಲ್ಲಿ 1933 ಜನವರಿ 6ರಂದು ಜನಿಸಿದ್ದ ಡಾ.ಪಂಚಾಕ್ಷರಿಯವರು ರಾಷ್ಟ್ರೀಯ ಚಳುವಳಿಯ ಪ್ರಭಾವಕ್ಕೊಳಗಾಗಿ ತಮ್ಮ ಶಿಕ್ಷಣವನ್ನು ಅರ್ಧದಲಿಯೇ ಮೊಟಕುಗೊಳಿಸಿ ಸ್ವಾತಂತ್ರ್ಯ…