Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಲೋಕಸಭಾ ಚುನಾವಣೆ-24 *ನಾಪಪತ್ರ ಸಲ್ಲಿಕೆ ಅಂತಿಮ ದಿನದಂದು 14 ನಾಮಪತ್ರ*  ಈವರೆಗೆ 38 ನಾಮಪತ್ರ ಸಲ್ಲಿಕೆ ಏ.22ರಂದು ನಾಮಪತ್ರ ವಾಪಸ್ ಪಡೆಯಲು ಅವಕಾಶ

ಲೋಕಸಭಾ ಚುನಾವಣೆ-24 *ನಾಪಪತ್ರ ಸಲ್ಲಿಕೆ ಅಂತಿಮ ದಿನದಂದು 14 ನಾಮಪತ್ರ*  ಈವರೆಗೆ 38 ನಾಮಪತ್ರ ಸಲ್ಲಿಕೆ ಏ.22ರಂದು ನಾಮಪತ್ರ ವಾಪಸ್ ಪಡೆಯಲು ಅವಕಾಶ ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.19 ರಂದು ಒಟ್ಟು 14 ನಾಮಪತ್ರಗಳು ಸಲ್ಲಿಕೆ ಆಗಿವೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್, ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿ ಚಂದ್ರಶೇಖರ್ ಹೆಚ್ ಸಿ, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಡಿ.ಎಸ್.ಈಶ್ವರಪ್ಪ, ಪಿ.ಶ್ರೀಪತಿ, ಎಸ್.ಬಾಲಕೃಷ್ಣ ಭಟ್, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ,…

Read More

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಘೋಷಣೆ ಮಾಡಿದ ಆಕಾಶ್ ಬೈಜೂಸ್

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಘೋಷಣೆ ಮಾಡಿದ ಆಕಾಶ್ ಬೈಜೂಸ್ ಶಿವಮೊಗ್ಗ, ಆಕಾಶ್ ಬೈಜೂಸ್ ಏಪ್ರಿಲ್ 2024 ರಲ್ಲಿ ಆರಂಭವಾಗಲಿರುವ ವೈದ್ಯರು ಮತ್ತು ಎಂಜಿನಿಯರ್ ಗಳಾಗಬೇಕೆಂದು ಹೊತ್ತಿರುವ ಹಲವಾರು ವಿದ್ಯಾರ್ಥಿಗಳ ಕನಸನ್ನು ನನಸು ಮಾಡುವ ಉದ್ದೇಶದಿಂದ ವಿವಿಧ ವಿದ್ಯಾರ್ಥಿ ವೇತನಗಳನ್ನು ಪ್ರಕಟಿಸಿದೆ. ವಿದ್ಯಾರ್ಥಿ ವೇತನವೆಂದರೆ ಇನ್ ಸ್ಟಂಟ್ ಅಡ್ಮಿಶನ್ ಕಮ್ ಸ್ಕಾಲರ್ ಶಿಪ್ ಟೆಸ್ಟ್ (iACST) ಆಗಿದೆ. ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ಫೌಂಡೇಶನ್ ಕೋರ್ಸ್ ಗಳ ಪ್ರವೇಶಕ್ಕೆ ಶೇ.90 ರವರೆಗೆ ವಿದ್ಯಾರ್ಥಿವೇತನ ದೊರೆಯಲಿದೆ. ಇದಲ್ಲದೇ, ಆಕಾಶ್ ಬೈಜೂಸ್…

Read More

ಶಿವಮೊಗ್ಗದಲ್ಲಿ ಇಂದು ಭಾರಿ ಮಳೆಯ ನಿರೀಕ್ಷೆ, ಯೆಲ್ಲೋ ಅಲರ್ಟ್​ ಘೋಷಣೆ!

ಶಿವಮೊಗ್ಗದಲ್ಲಿ ಇಂದು ಭಾರಿ ಮಳೆಯ ನಿರೀಕ್ಷೆ, ಯೆಲ್ಲೋ ಅಲರ್ಟ್​ ಘೋಷಣೆ! ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಮದುವರೆದಿದ್ದು ಆದರೆ ವರುಣದೇವ ಇನ್ನೂ ಕೃಪೆ ತೋರಿಲ್ಲ. ಗುರುವಾರದಿಂದಲೇ ಶಿವಮೊಗ್ಗದಲ್ಲಿ ಗಾಳಿ, ಗುಡುಗು ಸಮೇತ ಮಳೆ(Rain) ಶುರುವಾಗಿದೆ. ಇಂದು ಕೂಡ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗುವ…

Read More

ಹೊಸ ಅಂಕಣ by sowmya koti;ಮತದಾನ ನಮ್ಮ ಹಕ್ಕು

ಮತದಾನ ನಮ್ಮ ಹಕ್ಕು 18 ವರ್ಷ ಆದೊಡನೆ ನಮಗೆ ಸಿಗುವಂತಹ ಅತ್ಯಮೂಲ್ಯವಾದ ಹಕ್ಕು ಎಂದರೆ ಅದು ಮತದಾನ. ಅದರಲ್ಲೂ ಮೊದಲ ಬಾರಿ ಮತದಾನ ಮಾಡುವವರು ಅತಿ ಹೆಚ್ಚಾಗಿ ಉತ್ಸುಕರಾಗಿರುತ್ತಾರೆ. ಆದರೆ ಈ ಹುರುಪಿನ ಜೊತೆ ಈ ನಮ್ಮ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳ ಬಗ್ಗೆ ಅತಿ ಹೆಚ್ಚು ತಿಳಿದು ಮತದಾನ ಮಾಡುವುದು ಸೂಕ್ತ.ಒಂದೊಂದು ವೋಟು ಸಹ ಅತ್ಯಮೂಲ್ಯವೇ. ಹಾಗಾಗಿ ಪೋಷಕರು ಸಹ ಮುಕ್ತವಾಗಿ ಮನೆಯಲ್ಲಿ ಯಾವ ಪಕ್ಷ ಏನು ಕೆಲಸ ಮಾಡುತ್ತಿದೆ ಹೇಗೆ ನಮ್ಮ ಸರ್ಕಾರ ಇದರಿಂದ…

Read More

ಪಕ್ಷೇತರ ಅಭ್ಯರ್ಥಿಯಾಗಿ ಶಿವರುದ್ರಯ್ಯ ಸ್ವಾಮಿ ನಾಮಪತ್ರ

ಶಿವಮೊಗ್ಗ ಲೋಕಸಭಾ ಚುನಾವಣಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ *ಶಿವರುದ್ರಯ್ಯ ಸ್ವಾಮಿ* ಅವರು ಗುರುವಾರ ಚುನಾವಣಾಧಿಕಾರಿಗಳಾದ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು.

Read More

ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷರಾಗಿ ಆರ್.ವಿಜಯ್ ಕುಮಾರ್(ದನಿ) ಆಯ್ಕೆ- ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ

ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷರಾಗಿ ಆರ್.ವಿಜಯ್ ಕುಮಾರ್(ದನಿ) ಆಯ್ಕೆ- ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ ನೂತನವಾಗಿ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಆರ್,ವಿಜಯಕುಮಾರ್(ದನಿ) ಸಂತೇಕಡೂರುರವರನ್ನ ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ  ಮಧುಬಂಗಾರಪ್ಪನವರು ಅಭಿನಂದಿಸಿ ಶುಭ ಹಾರೈಸಿದರು.

Read More

ಗ್ರಾಮಾಂತರ ಕಾರ್ಯಕರ್ತರ ಸಭೆಯಲ್ಲಿ ಗೀತಾ ಶಿವರಾಜ್ ಕುಮಾರ್ ಅಭಿಪ್ರಾಯ; ಬರಗಾಲ, ಬೆಲೆ ಏರಿಕೆ ಸಮಯದಲ್ಲಿ ಗ್ಯಾರಂಟಿಗಳು ಜನರ ಕೈ ಹಿಡಿದಿವೆ

ಗ್ರಾಮಾಂತರ ಕಾರ್ಯಕರ್ತರ ಸಭೆಯಲ್ಲಿ ಗೀತಾ ಶಿವರಾಜಕುಮಾರ ಅಭಿಪ್ರಾಯ ಬರಗಾಲ, ಬೆಲೆ ಏರಿಕೆ ಸಮಯದಲ್ಲಿ ಗ್ಯಾರಂಟಿಗಳು ಜನರ ಕೈ ಹಿಡಿದಿವೆ ಶಿವಮೊಗ್ಗ:’ರಾಜ್ಯದಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು ಬರಗಾಲ ಮತ್ತು ಬೆಲೆ ಏರಿಕೆಯ ಇಂದಿನ ದಿನಮಾನಗಳಲ್ಲಿ ಜನಸಾಮಾನ್ಯರ ಕೈಹಿಡಿದಿವೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅಭಿಪ್ರಾಯಪಟ್ಟರು. ತಾಲ್ಲೂಕಿನ ಸಿರಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಗೆರೆ ಮಾರಿಕಾಂಬಾ ದೇವಸ್ಥಾನ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಗ್ರಾಮಾಂತರ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ…

Read More

ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ, ಡಿಸಿಸಿ ಬ್ಯಾಂಕಿನ ಅಧ್ಯಕ್ಷರೂ ಆಗಿರುವ ಆರ್.ಎಮ್.ಮಂಜುನಾಥ್ ಗೌಡರವರ ಪತ್ರಿಕಾಗೋಷ್ಠಿ… ಕಾಂಗ್ರೆಸ್ ಗೆದ್ದೇ ಗೆಲ್ಲುವ ವಿಶ್ವಾಸ ಹೆಚ್ಚಾಗಿದೆ ಶರಾವತಿ ಸಂತ್ರಸ್ತರ ಹೆಸರಲ್ಲಿ ಸುಳ್ಳು ಹೇಳುತ್ತಿದೆ ಬಿಜೆಪಿ ಕಾಗೋಡು ತಿಮ್ಮಪ್ಪ ರವರ ಹೆಸರು ಹೇಳೋ ಯೋಗ್ಯತೆಯೂ ಬಿಜೆಪಿಗಿಲ್ಲ

ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ, ಡಿಸಿಸಿ ಬ್ಯಾಂಕಿನ ಅಧ್ಯಕ್ಷರೂ ಆಗಿರುವ ಆರ್.ಎಮ್.ಮಂಜುನಾಥ್ ಗೌಡರವರ ಪತ್ರಿಕಾಗೋಷ್ಠಿ… ಕಾಂಗ್ರೆಸ್ ಗೆದ್ದೇ ಗೆಲ್ಲುವ ವಿಶ್ವಾಸ ಹೆಚ್ಚಾಗಿದೆ ಶರಾವತಿ ಸಂತ್ರಸ್ತರ ಹೆಸರಲ್ಲಿ ಸುಳ್ಳು ಹೇಳುತ್ತಿದೆ ಬಿಜೆಪಿ ಕಾಗೋಡು ತಿಮ್ಮಪ್ಪ ರವರ ಹೆಸರು ಹೇಳೋ ಯೋಗ್ಯತೆಯೂ ಬಿಜೆಪಿಗಿಲ್ಲ ಮೊನ್ನೆ ನಡೆದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಮಯದಲ್ಲಿ ಜಿಲ್ಲೆಯ ಜನತೆ ಗೆಲ್ಲುವ ಆತ್ಮ ವಿಶ್ವಾದ ಶಕ್ತಿ ತುಂಬಿದ್ದಾರೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಬಂದಿರುವುದು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್, ಶಕ್ತಿ ತುಂಬಿದೆ. ಅವರೊಬ್ಬ ಕಾಂಗ್ರೆಸ್…

Read More

ಶಿವಮೊಗ್ಗ ಮಹಾನಗರ ಪಾಲಿಕೆಗೆ ಎರಡೂ ಕಡೆಗಳಿಂದ ಬೀಗ! ಎರಡೂ ಗೇಟ್ ಗಳಿಗೆ ಬೀಗ ಜಡಿದಿದ್ದು ಯಾರು? ಯಾಕೆ?

ಶಿವಮೊಗ್ಗ ಮಹಾನಗರ ಪಾಲಿಕೆಗೆ ಎರಡೂ ಕಡೆಗಳಿಂದ ಬೀಗ! ಎರಡೂ ಗೇಟ್ ಗಳಿಗೆ ಬೀಗ ಜಡಿದಿದ್ದು ಯಾರು? ಯಾಕೆ? ಶಿವಮೊಗ್ಗ ಮಹಾನಗರ ಪಾಲಿಕೆಗೆ ಬಿಜೆಪಿಯಿಂದ ಎರಡೂ ಮಹಾ ಬಾಗಿಲುಗಳಿಗೆ ಬೀಗ ಜಡಿಯಲಾಗಿದೆಯಾ? ಅಥವಾ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆಗೆ ಅನುಕೂಲವಾಗಲೆಂದು ಮಹಾನಗರ ಪಾಲಿಕೆಯ ಎರಡೂ ಗೇಟ್ ಗಳನ್ನು ಬಂದ್ ಮಾಡಲಾಗಿದೆಯಾ? ಆಸ್ತಿ ತೆರಿಗೆ ಸೇರಿದಂತೆ ಬೇರೆ ಬೇರೆ ಅನಿವಾರ್ಯದ ಕೆಲಸಗಳಿಗೆ ಮಹಾನಗರ ಪಾಲಿಕೆಗೆ ಬಂದ ಸಾರ್ವಜನಿಕರು ಪಾಲಿಕೆ ಅಧಿಕಾರಿಗಳ ಈ ಗೇಟ್ ಮುಚ್ಚಿರೋ ಕ್ರಮ ಆಶ್ಚರ್ಯ ಮೂಡಿಸಿರುವುದಲ್ಲದೇ…

Read More

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ

ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ *ಬಿ ವೈ ರಾಘವೇಂದ್ರ* ಅವರು ಗುರುವಾರ ಚುನಾವಣಾಧಿಕಾರಿಗಳಾದ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯರಾದ ಭಾನುಪ್ರಕಾಶ್, ಮಾಜಿ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಗ್ರಾಮಾಂತರ ಜೆಡಿಎಸ್ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ ಇದ್ದರು.

Read More