Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆಗೆ ಮೊದಲ ಸಾವು

ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆಗೆ ಮೊದಲ ಸಾವು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜಿಡ್ಡಿಯಲ್ಲಿ ಮಂಗನಕಾಯಿಲೆಗೆ ಮಹಿಳೆಯೊಬ್ಬರು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಿಡ್ಡಿಯ 65 ವರ್ಷದ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಿಸದೇಾವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಮಹಿಳೆಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಡಿಮೆಯಾಗಿ ಅವರನ್ನು ಕರೆದುಕೊಂಡು ಬಂದ ನಂತರ ಮತ್ತೆ ಜ್ವರ ಕಾಣಿಸಿಕೊಂಡು ಉಲಬಣಗೊಂಡಿತು ಎನ್ನಲಾಗಿದೆ. ಈವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ…

Read More

ಹೊಸ ರಸ್ತೆಗಳಿಂದ ಶಿವಮೊಗ್ಗದಲ್ಲಿ ಸಮಗ್ರ ಅಭಿವೃದ್ದಿ ಆಗಲಿದೆ : ಕೇಂದ್ರ ಸಚಿವ ನಿತಿನ್ ಗಡ್ಕರಿ*

*ಹೊಸ ರಸ್ತೆಗಳಿಂದ ಶಿವಮೊಗ್ಗದಲ್ಲಿ ಸಮಗ್ರ ಅಭಿವೃದ್ದಿ ಆಗಲಿದೆ : ಕೇಂದ್ರ ಸಚಿವ ನಿತಿನ್ ಗಡ್ಕರಿ* ಶಿವಮೊಗ್ಗದಲ್ಲಿ ಹೊಸ ರಸ್ತೆಗಳಿಂದಾಗಿ ವ್ಯಾಪಾರ, ಕೈಗಾರಿಕೆ, ಶಿಕ್ಷಣ ಸೇರಿದಂತೆ ಸಮಗ್ರ ಕಲ್ಯಾಣ ಆಗಲಿದೆ ಎಂದು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಸ್ತೆ ಸಾರಿಗೆ ಮತ್ತು ಹೆದ್ದಾರಿ, ಭಾರತ ಸರ್ಕಾರ ಹಾಗೂ ಪಿಡಬ್ಲ್ಯ ಡಿ ಇಲಾಖೆ ಶಿವಮೊಗ್ಗ ವತಿಯಿಂದ ಇಂದು ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿವಿಧ ಕಾಮಗಾರಿಗಳ ಚಾಲನೆ ಮತ್ತು ಶಂಕುಸ್ಥಾಪನೆಗೊಳಿಸುವ ಕಾರ್ಯಕ್ರಮದಲ್ಲಿ…

Read More

ದೆಹಲಿಯಲ್ಲಿ ಕಾಂಗ್ರೆಸ್‌- ಎಎಪಿ ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮ

ದೆಹಲಿಯಲ್ಲಿ ಕಾಂಗ್ರೆಸ್‌- ಎಎಪಿ ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮ ಕೃಪೆ :ನಾನು ಗೌರಿ ಲೋಕಸಭೆ ಚುನಾವಣೆ ಹಿನ್ನೆಲೆ ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಸೀಟು ಹಂಚಿಕೆಯನ್ನು ಅಂತಿಮ ಮಾಡಿಕೊಂಡಿದೆ. ಹಲವು ಸುತ್ತಿನ ಚರ್ಚೆಗಳ ನಂತರ ದೆಹಲಿಯ ಏಳು ಲೋಕಸಭಾ ಸ್ಥಾನಗಳಿಗೆ ತಮ್ಮ ಸೀಟು ಹಂಚಿಕೆ ಮೈತ್ರಿಯನ್ನು ಅಂತಿಮಗೊಳಿಸಿವೆ ಎಂದು ಕಾಂಗ್ರೆಸ್‌ ಮತ್ತು ಎಎಪಿ ಮೂಲಗಳು ತಿಳಿಸಿದೆ. ಎಎಪಿ ನಾಲ್ಕು ಮತ್ತು ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಮೂಲಕ ನಾಲ್ಕು-ಮೂರು ಸೀಟು ಹಂಚಿಕೆ ಸೂತ್ರಕ್ಕೆ ಎಎಪಿ…

Read More

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ*

*ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ* ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ಆದಾಯ ಮಿತಿ ರೂ.2.50…

Read More

ಬಿಜೆಪಿ ಟೀಕೆಗಳಿಗೆ ಫಲಾನುಭವಿಗಳದ್ದೇ ಉತ್ತರ; ಫೆ.24 ರಂದು ಪಂಚ ಗ್ಯಾರಂಟಿ ಸಮಾವೇಶ- ಹೆಚ್.ಎಸ್.ಸುಂದರೇಶ್ ಪತ್ರಿಕಾಗೋಷ್ಠಿ

ಕಷ್ಟಗಳಿಗೆ “ಕೈ” ಹಿಡಿದ ಕಾಂಗ್ರೆಸ್ ಸರ್ಕಾರದಿಂದ 5 ಗ್ಯಾರಂಟಿಗಳ ಬಗ್ಗೆ ಮತ್ತಷ್ಟು ವಿಶ್ವಾಸ ತುಂಬಲು ಶಿವಮೊಗ್ಗದಲ್ಲಿ ಫೆ.24ರಂದು ಬೆಳಿಗ್ಗೆ 11ಕ್ಕೆ ಅಲ್ಲಮಪ್ರಭು ಬಯಲು ಮಂಟಪ (ಫ್ರೀಡಂ ಪಾರ್ಕ್)ದಲ್ಲಿ ಜಿಲ್ಲಾ ಫಲಾನುಭವಿಗಳ ಸಮಾವೇಶವನ್ನು ಆಯೋಜಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು. ಅವರು ಇಂದು ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ಕೋಟ್ಯಾಂತರ ಮಹಿಳೆಯರು ಮತ್ತು ಬಡವರು ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲೂ ಕೂಡ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಬಡವರು ಎಲ್ಲಾ…

Read More

ಗೌರವ ಡಾಕ್ಟರೇಟ್ ಹೆಸರಿನ ಮುಂದೆ ‘ಡಾ.’ ಪದ ಬಳಕೆ ನಿರ್ಬಂಧಿಸಿದ ರಾಜ್ಯ ಸರ್ಕಾರ

ಗೌರವ ಡಾಕ್ಟರೇಟ್ ಹೆಸರಿನ ಮುಂದೆ ‘ಡಾ.’ ಪದ ಬಳಕೆ ನಿರ್ಬಂಧಿಸಿದ ರಾಜ್ಯ ಸರ್ಕಾರ ಗೌರವ ಡಾಕ್ಟರೇಟ್ ಪಡೆದಿದ್ದರೂ ಅವರು ತಮ್ಮ ಹೆಸರಿನ ಮುಂದೆ ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕ‌ರ್ ತಿಳಿಸಿದರು.ಪ್ರಶೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಗೌರವ ಡಾಕ್ಟರೇಟ್ ಕೊಡುವುದಕ್ಕೂ ನಿಯಮ ಇದೆ. ಗೌರವ ಡಾಕ್ಟರೇಟ್ ಪಡೆದವರು ಹೆಸರಿನ ಮೊದಲು ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ. ಈ ಬಗ್ಗೆ ಸುಪ್ರಿಂ ಕೋರ್ಟ್‌…

Read More

ಶಿವಮೊಗ್ಗ ನಗರ ಜೆಡಿಎಸ್ ನಿಂದ ವಾರ್ಡ್ ವಾರು ಸಭೆ

ಶಿವಮೊಗ್ಗ ನಗರ ಜೆಡಿಎಸ್ ವತಿಯಿಂದ ನಿನ್ನೆ ದಿವಸ ವಾರ್ಡ್ ನo 17, 24 ಹಾಗೂ 25 ರಲ್ಲಿ ಜೆಡಿಎಸ್ ಪ್ರಮುಖರು ಮತ್ತು ಕಾರ್ಯಕರ್ತರ ಸಭೆಯನ್ನು ರಂಗನಾಥ ಬಡಾವಣೆಯ ಶನೇಶ್ವರ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪಕ್ಷದ ಸಂಘಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ನಗರ ಜೆಡಿಎಸ್ ನಾಯಕರು ವಾರ್ಡ್ ನo 17, 24 ಮತ್ತು 25 ರ ಕುಂದು ಕೊರತೆಗಳ ಬಗ್ಗೆ ಗಮನಹರಿಸಿದರು. ನೂರಾರು ಸಂಖ್ಯೆಯಲ್ಲಿ ಉಪಸ್ಥಿಜಿತರಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕ, ರಾಜ್ಯ ಜೆಡಿಎಸ್ ಉಪಾಧ್ಯಕ್ಷ…

Read More

ಫೆ.24 ಕ್ಕೆ ಪಂಚ ಗ್ಯಾರಂಟಿಗಳ ಸಮಾವೇಶ- ಹೆಚ್.ಸಿ.ಯೋಗೇಶ್ ಹೇಳಿದ್ದೇನು?* *ಡಿಕೆ ಸಾಹೇಬರಿಗೆ ಪಂಚ ಗ್ಯಾರಂಟಿಗಳ ವಿಶೇಷ ಹಾರದ ಸನ್ಮಾನ

ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ಮುಖಂಡರಾದ ಹೆಚ್.ಸಿ.ಯೋಗೇಶ್ ಪತ್ರಿಕಾಗೋಷ್ಠಿ *ಫೆ.24 ಕ್ಕೆ ಪಂಚ ಗ್ಯಾರಂಟಿಗಳ ಸಮಾವೇಶ- ಹೆಚ್.ಸಿ.ಯೋಗೇಶ್ ಹೇಳಿದ್ದೇನು?* *ಡಿಕೆ ಸಾಹೇಬರಿಗೆ ಪಂಚ ಗ್ಯಾರಂಟಿಗಳ ವಿಶೇಷ ಹಾರದ ಸನ್ಮಾನ* ಫೆ.24 ಕ್ಕೆ ಅಲ್ಲಮ ಪ್ರಭು ಮೈದಾನದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಬೃಹತ್ ಪಂಚ ಗ್ಯಾರಂಟಿಗಳ ಸಮಾವೇಶಕ್ಕೆ ಶಿವಮೊಗ್ಗ ನಗರದಿಂದ ಸುಮಾರು ಹತ್ತು ಸಾವಿರ ಜನ ಫಲಾನುಭವಿಗಳು ಬರಲಿದ್ದಾರೆ.ಅವರಿಗೆಲ್ಲ ವೈಯಕ್ತಿಕವಾಗಿ ಆಹ್ವಾನಿಸಲಾಗಿದೆ. 15 ಸಾವಿರ ಆಹ್ವಾನ ಪತ್ರಿಕೆಗಳನ್ನು ಶಿವಮೊಗ್ಗದಲ್ಲಿ ಈಗಾಗಲೇ ವಾರ್ಡ್ ಅಧ್ಯಕ್ಷರು, ಪ್ರತಿನಿಧಿಗಳ ಮೂಲಕ ಹಂಚಲಾಗಿದೆ. ಕಾಂಗ್ರೆಸ್ ಪಕ್ಷದ ಈ…

Read More

ಇವತ್ತಿನ ಕವಿಸಾಲು

*ಕವಿಸಾಲು* ಸೂರ್ಯನನ್ನೇ ನಿನ್ನ ಮನೆಬಾಗಿಲಿಗೆ ಬಿಟ್ಟು ಬಂದಿದ್ದೆ; ಈಗದೇ ಬೆಳಕನ್ನು ಭಿಕ್ಷೆಯಾಗಿ ನೀಡಲು ಹೊರಟಿದ್ದೀಯ! ದುರಹಂಕಾರವೆಂದರೆ; ತಲೆಯಿಂದ ನಡೆಯುವುದು! – *ಶಿ.ಜು.ಪಾಶ* 8050112067 (22/2/24)

Read More

ಫೆ.26/27-ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ

*ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ* ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ. 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಳ್ಳುವುದು. 50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ವಿವಿಧ ಕ್ಷೇತ್ರಗಳಲ್ಲಿ…

Read More