ಶಿವಮೊಗ್ಗದ ವಿನೋಬನಗರದಲ್ಲಿ ಯುವಕನ ಕಗ್ಗೊಲೆ*
*ಶಿವಮೊಗ್ಗದ ವಿನೋಬನಗರದಲ್ಲಿ ಯುವಕನ ಕಗ್ಗೊಲೆ* ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಯುವಕನೊಬ್ಬನ ಕೊಲೆಯಾಗಿದೆ. 26 ವರ್ಷದ ಅರುಣ್ ಎಂಬಾತನೇ ಕೊಲೆಯಾಗಿರುವ ಯುವಕ. ಆತನ ಸಂಬಂಧಿಕರೇ ಈ ಕೃತ್ಯ ಎಸಗಿದ್ದಾರೆಂದು ಶಂಕಿಸಲಾಗಿದೆ. ವೈವಾಹಿಕ ವಿವಾದವೇ ಕೊಲೆಗೆ ಕಾರಣ ಎಂದು ಮಾಹಿತಿ ಸಿಕ್ಕಿದ್ದು, ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದ್ದು, ಬಂಧಿಸಲಾಗಿದೆ. ಕೊಲೆಯಾದ ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದಾರೆ.


