*ಗೋಮಾಂಸ ಸಾಗಾಟ ವೇಳೆ ನೈತಿಕ ಪೊಲೀಸ್ಗಿರಿ;* *ಮಗಳನ್ನು ಬಿಟ್ಟು ಓಡಿಹೋದ ತಂದೆ!*
*ಗೋಮಾಂಸ ಸಾಗಾಟ ವೇಳೆ ನೈತಿಕ ಪೊಲೀಸ್ಗಿರಿ;*
*ಮಗಳನ್ನು ಬಿಟ್ಟು ಓಡಿಹೋದ ತಂದೆ!*
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ಗಿರಿ (Moral Policing) ಮುಂದುವರೆದಿದೆ. ದ್ವಿಚಕ್ರ ವಾಹನದಲ್ಲಿ ಗೋಮಾಂಸ ಸಾಗಿಸುವಾಗ ತಡೆದು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಗಳೂರಿನ (Mangaluru) ಮಳಲಿ-ನಾರ್ಲಪದವು ರಸ್ತೆಯಲ್ಲಿ ಘಟನೆ ನಡೆದಿದೆ. ಗೋಮಾಂಸ ಸಾಗಣೆ ಹಿನ್ನೆಲೆ ಅಬ್ದುಲ್ ಸತ್ತಾರ್ ಮುಲ್ಲಾರಪಟ್ನಾ ಎಂಬುವವರ ವಿರುದ್ಧ ಬಜ್ಪೆ ಠಾಣೆಯಲ್ಲಿ ಸ್ವತಂಪ್ರೇರಿತ ಕೇಸ್ ದಾಖಲಾಗಿದೆ.
ಅಬ್ದುಲ್ ಸತ್ತಾರ್ ಮುಲ್ಲಾರಪಟ್ನಾ ಎಂಬುವವರು ಗೋಮಾಂಸ ಸಾಗಟ ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಮಂಗಳೂರಿನ ಮಳಲಿ-ನಾರ್ಲಪದವು ರಸ್ತೆಯಲ್ಲಿ ಗೋಮಾಂಸ ಸಾಗಿಸುವಾಗ ಟಾಟಾ ಸುಮೊದಲ್ಲಿ ಚೇಸ್ ಮಾಡಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಅಬ್ದುಲ್ರನ್ನು ತಡೆದು ಸುಮಿತ್ ಬಂಡಾರಿ ಮತ್ತು ರಜತ್ ನಾಯ್ಕ್ರಿಂದ ನೈತಿಕ ಪೊಲೀಸ್ಗಿರಿ ಮೆರೆಯಲಾಗಿದೆ.
ದ್ವಿಚಕ್ರ ವಾಹನ ಬಿದ್ದಾಗ ಸೈಲೆನ್ಸರ್ ಟಚ್ ಆಗಿದ್ದರಿಂದ ಅಬ್ದುಲ್ ಸತ್ತಾರ್ ಮುಲ್ಲಾರಪಟ್ನಾ ಮಗಳ ಕಾಲಿಗೆ ಗಾಯವಾಗಿದೆ. ದ್ವಿಚಕ್ರ ವಾಹನ ಮತ್ತು ಮಗಳನ್ನು ಬಿಟ್ಟು ಅಬ್ದುಲ್ ಸತ್ತಾರ್ ಓಡಿಹೋಗಿದ್ದಾರೆ. ಅಬ್ದುಲ್ ಸತ್ತಾರ್ ಪುತ್ರಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ತಂದೆ ಮೇಲೆ ಹಲ್ಲೆ ಮಾಡಿದರು ಎಂದು ಪುತ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಈ ಹಿನ್ನೆಲೆ ಸುಮಿತ್ ಮತ್ತು ರಜತ್ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


