*ಟ್ರಾಫಿಕ್ ಪೊಲೀಸ್ ಆತ್ಮಹತ್ಯೆ ಪ್ರಕರಣ; ಖೇದದ ಜೊತೆ ಕೌನ್ಸಿಲಿಂಗ್ ಗೆ ಒತ್ತಾಯಿಸಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್

*ಟ್ರಾಫಿಕ್ ಪೊಲೀಸ್ ಆತ್ಮಹತ್ಯೆ ಪ್ರಕರಣ; ಖೇದದ ಜೊತೆ ಕೌನ್ಸಿಲಿಂಗ್ ಗೆ ಒತ್ತಾಯಿಸಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್*

ಇಂದು ನಗರವೇ ಬೆಚ್ಚಿ ಬೀಳುವ ಸುದ್ದಿ ಹೊರಬಂದಿದೆ. ನಮ್ಮನ್ನೆಲ್ಲ ರಕ್ಷಣೆ ಮಾಡುತ್ತಿದ್ದ ಟ್ರಾಫಿಕ್ ಪೊಲೀಸ್ ಮೊಹಮ್ಮದ್ ಜಕ್ರಿಯ ರವರು ಠಾಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವುದು ಖೇದಕರ ವಿಚಾರವಾಗಿದೆ ಎಂದು ರಾಜ್ಯ ಜೆಡಿಎಸ್ ಉಪಾಧ್ಯಕ್ಷರೂ ಮಾಜಿ ಶಾಸಕರೂ ಆದ ಕೆ.ಬಿ.ಪ್ರಸನ್ನ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕೂಡಲೇ ಜಿಲ್ಲಾ ರಕ್ಷಣಾಧಿಕಾರಿಗಳು ಇವರ ಆತ್ಮಹತ್ಯೆಗೆ ಕಾರಣರಾದ ವ್ಯಕ್ತಿಗಳ ವಿರುದ್ಧ ಕ್ರಮ ತೆಗೆದುಕೊಂಡು ಶಿಕ್ಷೆಯನ್ನು ಕೊಡಿಸುವುದರ ಜೊತೆಗೆ ಒತ್ತಡದಲ್ಲಿರುವ ಕೆಳ ಹಂತದ ಪೊಲೀಸ್ ಸಿಬ್ಬಂದಿಗಳಿಗೆ ಕೌನ್ಸಿಲಿಂಗ್ ಕೊಡಿಸುವುದರ ಮೂಲಕ ಆತ್ಮ ಸ್ಥೈರ್ಯ ಹೆಚ್ಚಿಸಬೇಕೆಂದು ಜಿಲ್ಲಾ ರಕ್ಷಣಾಧಿಕಾರಿಗಳಲ್ಲಿ ಅವರು ಮಾಧ್ಯಮ ಮೂಲಕ ಒತ್ತಾಯಿಸಿದ್ದಾರೆ.