ಎಪಿಎಂಸಿ ಮಳಿಗೆಯೊಂದರ ಸಂಬಂಧ 50,000₹ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಎ.ಯೋಗೀಶ್*

*ಎಪಿಎಂಸಿ ಮಳಿಗೆಯೊಂದರ ಸಂಬಂಧ 50,000₹ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಹಿರಿಯ ಮಾರುಕಟ್ಟೆ ಮೇಲ್ವಿಚಾರಕ .ಯೋಗೀಶ್*

 ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಹಾಗೂ ಕಛೇರಿಯಲ್ಲಿ ಎಪಿಎಂಸಿ ಮಳಿಗೆ ಮಂಜೂರು ಮಾಡಲು ೨ ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಹಾಗೂ ಮೇಲ್ವಿಚಾರಕ ಯೋಗೀಶ್ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದು, ೫೦ ಸಾವಿರ ಲಂಚ ಸ್ವೀಕರಿಸುವ ವೇಳೆಗೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹೊಸನಗರ ತಾಲ್ಲೂಕು ನೇರಲಿಗೆ ಗ್ರಾಮದ ರವೀಂದ್ರ ಎಂಬುವವರ ದೂರಿನ ಮೇರೆಗೆ ಈ ದಾಳಿ ನಡೆದಿದ್ದು, ಶಿವಮೊಗ್ಗ ಲೋಕಾಯುಕ್ತ ಡಿವೈಎಸ್‌ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆದಿದೆ.