.8-9 ಶಿವರಾತ್ರಿ ಪ್ರಯುಕ್ತ ಹರಕೆರೆ ಜಾತ್ರೆ; ವಾಹನಗಳ ಮಾರ್ಗ ಬದಲಾವಣೆ

ಮಾ.8-9 ಶಿವರಾತ್ರಿ ಪ್ರಯುಕ್ತ ಹರಕೆರೆ ಜಾತ್ರೆ;

ವಾಹನಗಳ ಮಾರ್ಗ ಬದಲಾವಣೆ

ಶಿವಮೊಗ್ಗ; .8 ಮತ್ತು 9 ರಂದು ಶಿವಮೊಗ್ಗ ನಗರದಲ್ಲಿ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಮಾ.08 ರ ಬೆಳಗ್ಗಿನ ಜಾವ 4 ರಿಂದ 09 ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬಂದು ಹೋಗುವ ಕಾರಣ ಹಾಗೂ ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಭಕ್ತಾದಿಗಳು ಆಗಮಿಸುವುದರಿಂದ ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಸೂಚನೆ ಹೊರಡಿಸಿ ಆದೇಶ

ನೀಡಿದ್ದಾರೆ.

ತೀರ್ಥಹಳ್ಳಿ ಮಾರ್ಗವಾಗಿ ಓಡಾಡುವ ವಾಹನಗಳನ್ನು ಶಿವಮೊಗ್ಗದಿಂದ ತೀರ್ಥಹಳ್ಳಿಗೆ

ಹೋಗುವ ವಾಹನಗಳು ಗಜಾನನ ಗ್ಯಾರೇಜ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್ ಹೆಚ್ ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು.

ತೀರ್ಥಹಳ್ಳಿಯಿಂದ ಬರುವ ಎಲ್ಲಾ ವಾಹನಗಳು ಎನ್ ಹೆಚ್ ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್ ನಿಂದ ಗಜಾನನ ಗ್ಯಾರೇಜ್ ಮೂಲಕ ಬಂದು ಶಿವಮೊಗ್ಗ ಸೇರುವುದು.