ಮಾರಿಜಾತ್ರೆಗೆ ನೀರಿನ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲು ಹೆಚ್.ಸಿ.ಯೋಗೇಶ್ ಮತ್ತು ತಂಡದ ಆಗ್ರಹ*

*ಮಾರಿಜಾತ್ರೆಗೆ ನೀರಿನ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲು ಹೆಚ್.ಸಿ.ಯೋಗೇಶ್ ಮತ್ತು ತಂಡದ ಆಗ್ರಹ*

ಶಿವಮೊಗ್ಗದಲ್ಲಿ ಇದೇ ತಿಂಗಳು 12ರಿಂದ 16ರ ವರೆಗೆ 5 ದಿನಗಳ ಕಾಲ  ಪ್ರತಿ ಎರಡು ವರ್ಷಕ್ಕೊಮ್ಮೆ ಬರುವ ಗ್ರಾಮ ದೇವತೆ ಶ್ರೀ ಕೋಟೆ ಮಾರಿಕಾಂಬ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗುತ್ತಿದ್ದು, ಸಾರ್ವಜನಿಕರಿಗೆ ಈ ಸಂದರ್ಭದಲ್ಲಿ ಅನುಕೂಲವಾಗಲು 35 ವಾರ್ಡ್ ಗಳಲ್ಲೂ ನೀರಿನ ವ್ಯವಸ್ಥೆ ಮಾಡಬೇಕೆಂದು ಕಾಂಗ್ರೆಸ್ ವಿಧಾನಸಭಾ ಚುನಾವಣಾ ಅಭ್ಯರ್ಥಿಯಾಗಿದ್ದ, ಮಾಜಿ ಕಾರ್ಪೊರೇಟರ್ ಹೆಚ್.ಸಿ.ಯೋಗೇಶ್ ನೇತೃತ್ವದ ತಂಡ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿತು.

ಬಹಳ ಉತ್ಸಾಹದಿಂದ ಜಾತ್ರಾ ಮಹೋತ್ಸವವನ್ನು ಸಾರ್ವಜನಿಕರು ಆಚರಿಸುತ್ತಾರೆ. ಬೇರೆ ಬೇರೆ ಊರುಗಳಿಂದ ನೆಂಟರಿಷ್ಟರು, ಬಂಧು ಮಿತ್ರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಜಾತ್ರೆಯನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಹೀಗಿರುವಾಗ, ನಗರದಲ್ಲಿ ಪ್ರಮುಖವಾಗಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆಯ ಬಗ್ಗೆ ಗಮನಹರಿಸುವಂತೆ ಬೇಕಾದ ಸೂಕ್ತ ವ್ಯವಸ್ಥೆಗಳನ್ನು ಮಾಡಿಕೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ  ಮಹಾನಗರ ಪಾಲಿಕೆ ಮಾಜಿ ಮೇಯರ್ ನಾಗರಾಜ್ ಕಂಕಾರಿ, ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕರುಗಳಾದ ರೇಖಾ ರಂಗನಾಥ್, ಮೆಹಕ್ ಶರೀಫ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಶಿವಕುಮಾರ್ , ಕೆ ರಂಗನಾಥ್,  ರಂಗೇಗೌಡ , ಮಧುಸೂದನ್ ಉಪಸ್ಥಿತರಿದ್ದರು