ಪ್ರಧಾನಿ ಭೇಟಿ; ಇದೇನಾದ್ರೂ ತಂದ್ರೆ ಕೂಡಲೇ ಬಂಧನ;ನೀರಿನ ಬಾಟಲಿ, ಬ್ಯಾಗ್, ಪೇಪರ್(ಚೀಟಿ), ಪೆನ್, ಕಪ್ಪು ಬಣ್ಣದ ಬಟ್ಟೆ / ಶರ್ಟ್ / ಕರವಸ್ತ್ರ, ಪ್ಲೇ ಕಾರ್ಡ್, ಬೆಂಕಿ ಪೊಟ್ಟಣ / ಲೈಟರ್, ಯಾವುದೇ ಸ್ಪೋಟಕ, ಅಪಾಯಕಾರಿ ವಸ್ತುಗಳು …

ಮಾ.18 ರ ನಾಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.  ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಮತ್ತು ಪರ್ಸ್ ಗಳನ್ನು ಹೊರತು ಪಡಿಸಿ, ನೀರಿನ ಬಾಟಲಿ, ಬ್ಯಾಗ್, ಪೇಪರ್(ಚೀಟಿ), ಪೆನ್, ಕಪ್ಪು ಬಣ್ಣದ ಬಟ್ಟೆ / ಶರ್ಟ್ / ಕರವಸ್ತ್ರ, ಪ್ಲೇ ಕಾರ್ಡ್, ಬೆಂಕಿ ಪೊಟ್ಟಣ / ಲೈಟರ್, ಯಾವುದೇ ಸ್ಪೋಟಕ, ಅಪಾಯಕಾರಿ ವಸ್ತುಗಳು  ಹಾಗೂ ಇತರೆ ಯಾವುದೇ ವಸ್ತುಗಳನ್ನು ತರುವಂತಿರುವುದಿಲ್ಲ.

ಪೊಲೀಸ್ ಇಲಾಖೆ ಈ ಎಚ್ಚರಿಕೆಯನ್ನು ನೀಡಿದ್ದು, ಇಂಥ ವಸ್ತುಗಳು ಕಂಡು ಬಂದರೆ ಕೂಡಲೇ ಬಂಧನಕ್ಕೊಳಗಾಗುವ ಸಾಧ್ಯತೆ ಇದೆ ಎಂದಿದೆ.