ಗೀತಾ ಗೆಲ್ಲಿಸಲು ಪಣ ತೊಟ್ಟ ಶಿವರಾಜ್ ಕುಮಾರ್ ಅಖಾಡಕ್ಕೆ ಅಧಿಕೃತವಾಗಿ ಇಳಿದ ಕಾಂಗ್ರೆಸ್ ಅಭ್ಯರ್ಥಿ

ಗೀತಾ ಗೆಲ್ಲಿಸಲು ಪಣ ತೊಟ್ಟ ಶಿವರಾಜ್ ಕುಮಾರ್

ಅಖಾಡಕ್ಕೆ ಅಧಿಕೃತವಾಗಿ ಇಳಿದ ಕಾಂಗ್ರೆಸ್ ಅಭ್ಯರ್ಥಿ

ಲೋಕಸಭಾ ಚುನಾವಣಾ(Lok Sabha Election) ಕಾವು ಹೆಚ್ಚಾಗಿದ್ದು, ಹ್ಯಾಟ್ರಿಕ್ ಹೀರೋ ಶಿವ ರಾಜ್​ಕುಮಾರ್ ಅವರ ಪತ್ನಿ ಗೀತಾ ಶಿವ ರಾಜ್​ಕುಮಾರ್ (Geeta Shivarajkumar) ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದಾರೆ. ಈ ಹಿನ್ನಲೆ ಶಿವಮೊಗ್ಗದಲ್ಲಿ ಗೀತಾ ಶಿವರಾಜ್ ​ಕುಮಾರ್ ಚುನಾವಣೆಯಲ್ಲಿ ಗೆಲ್ಲುವ ಮೂಲಕ  ನಮ್ಮ ತಂದೆಯ ಸೋಲಿನ ಸೇಡು ತಿರಿಸಿಕೊಳ್ಳಬೇಕಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ(madhu bangarappa) ವಾಗ್ದಾಳಿ ನಡೆಸಿದರು.

ಇಂದು ಟಿಕೆಟ್​ ಘೋಷಣೆ ಬಳಿಕ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಗೀತಾ ಅವರು ಆಗಮಿಸಿದ್ದು, ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿ ಎಂಆರ್​ಎಸ್ ವೃತ್ತದಿಂದ ಲಗಾನ್ ಕಲ್ಯಾಣ ಮಂದಿರದವರೆಗೆ ಬೃಹತ್ ಬೈಕ್​ ರ್‍ಯಾಲಿ ನಡೆಸಿದರು.  ಗೀತಾಗೆ ಪತಿ ಶಿವರಾಜ್ ಕುಮಾರ್ ಹಾಗೂ ಸಚಿವ ಮಧು ಬಂಗಾರಪ್ಪ ಅವರು ಸಾಥ್ ನೀಡಿದರು. ಬಳಿಕ ಮಾತನಾಡಿದ ಅವರು, ‘ಗೀತಕ್ಕ ಅವರನ್ನು ನಾವು ನಿಮ್ಮ ಮಡಿಲಿಗೆ ಹಾಕಿದ್ದೇವೆ. ಶಿವಮೊಗ್ಗ ಜಿಲ್ಲೆಯ ಧ್ವನಿಯಾಗಿ ಗೀತಾ ಕೆಲಸ ಮಾಡುತ್ತಾರೆ ಎಂದು ಗೀತಾ ಶಿವರಾಜ್ ಕುಮಾರ್​ ಪರ ಮತಯಾಚನೆ ಮಾಡಿದರು.