ನೈರುತ್ಯ ಪದವೀಧರ ಕ್ಷೇತ್ರಕ್ಕೆ ಆಯನೂರು ಮಂಜುನಾಥ್ ರಿಗೆ ಕಾಂಗ್ರೆಸ್ ಟಿಕೆಟ್; ಒಗ್ಗಟ್ಟಿನಿಂದ ಗೆಲ್ಲಿಸುತ್ತೇವೆ ಎಂದ ಹೆಚ್.ಎಸ್.ಸುಂದರೇಶ್

ನೈರುತ್ಯ ಪದವೀಧರ ಕ್ಷೇತ್ರಕ್ಕೆ ನಾಲ್ಕು ಮನೆಗಳ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ಅವರನ್ನು ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿ ಘೋಷಿಸಿದ್ದು, ಅವರ ಗೆಲುವಿಗೆ ನಾವೆಲ್ಲರೂ ಒಟ್ಟಾಗಿ ಶ್ರಮಿಸುತ್ತೇವೆ. ಅವರ ಗೆಲುವು ಖಚಿತ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಧಾನಪರಿಷತ್ ಚುನಾವಣೆ ದಿನಾಂಕವನ್ನು ಘೋಷಣೆ ಮಾಡುವ ಮೊದಲೇ ಕಾಂಗ್ರೆಸ್ ಪಕ್ಷ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ. ಆಯನೂರು ಮಂಜುನಾಥ್ ಈ ಹಿಂದೆ ಇದೇ ಕ್ಷೇತ್ರದಿಂದ ಗೆದ್ದು ಬಂದಿದ್ದರು. ಇದು ಅವರಿಗೆ ವರದಾನವಾಗಲಿದೆ ಎಂದರು.

ಅಭ್ಯರ್ಥಿ ಆಕಾಂಕ್ಷಿಯಾಗಿ ಎಸ್.ಪಿ.ದಿನೇಶ್ ಕೂಡ ಇದ್ದರು. ಈಗ ಪಕ್ಷ ಆಯನೂರು ಮಂಜುನಾಥ್‌ರವರಿಗೆ ಟಿಕೇಟ್ ನೀಡಿದೆ. ಪಕ್ಷದ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಗೆಲ್ಲಿಸುತ್ತೇವೆ. ಆಯನೂರು ಮಂಜುನಾಥ್ ಶಿಕ್ಷಕರ ಪರವಾಗಿ ಪದವೀಧರರ ಪರವಾಗಿ, ಕಾರ್ಮಿಕರ ಪರವಾಗಿ ಯಾವ ಪಕ್ಷದಲ್ಲಿದ್ದರು ಧ್ವನಿ ಎತ್ತಿದ್ದಾರೆ. ಹಾಗಾಗಿ ಅವರ ಗೆಲುವು ಖಚಿತ ಎಂದರು.

ಅಭ್ಯರ್ಥಿ ಆಯನೂರು ಮಂಜುನಾಥ್ ಮಾತನಾಡಿ, ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆಯವರು ಸೇರಿದಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ೬ ಜಿಲ್ಲೆಗಳ ಶಾಸಕರು, ಮುಖಂಡರು, ಉಸ್ತುವಾರಿ ಸಚಿವರುಗಳು ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು.

ಎಲ್ಲರ ಸಹಕಾರದಲ್ಲಿ ನನಗೆ ಟಿಕೇಟ್ ಸಿಕ್ಕಿದೆ. ಅವರ ಭರವಸೆಯನ್ನು ಉಳಿಸಿಕೊಳ್ಳುವೆ. ನನ್ನ ಗೆಳೆಯ ಎಸ್.ಪಿ.ದಿನೇಶ್‌ಅವರು ಕೂಡ ಸ್ಪರ್ಧೆಯ ಆಕಾಂಕ್ಷಿಯಾಗಿದ್ದರು ಅವರಿಗೆ ಟಿಕೇಟ್ ಸಿಕ್ಕರೆ ನಾನು ಅವರ ಪರ ನಿಂತು ಗೆಲ್ಲಿಸುತ್ತೇನೆ ಎಂದು ಹೇಳಿದ್ದೆ, ಈಗ ನನಗೆ ಟಿಕೇಟ್ ಸಿಕ್ಕಿದೆ ಅವರನ್ನು ನಾನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ಪರವಾಗಿ ಅವರು ಕೆಲಸ ಮಾಡುತ್ತಾರೆ. ಎಲ್ಲಾರು ಒಟ್ಟಾಗಿ ಕೆಲಸ ಮಾಡುತ್ತೇವೆ. ನಾನು ಈ ಬಾರಿ ಗೆಲ್ಲುತ್ತೇನೆ. ಎದುರಾಳಿ ಯಾರು ಎಂಬುವುದು ಮುಖ್ಯವಲ್ಲ. ನನ್ನ ಗೆಲ್ಲುವಷ್ಟೇ ಮುಖ್ಯ ಅಂದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಭರ್ಜರಿ ಪ್ರಚಾರವನ್ನು ಆರಂಭಿಸಿದೆ. ಗೀತಾಶಿವರಾಜ್‌ಕುಮಾರ್ ಅತ್ಯಂತ ಉತ್ಸಾಹದಲ್ಲಿದ್ದಾರೆ. ಎಲ್ಲ ಕಡೆ ಭವ್ಯಸ್ವಾಗತ ದೊರೆಯುತ್ತಿದೆ. ಪ್ರಚಾರ ತೀವ್ರತೆ ಕಂಡುಕೊಂಡಿದೆ. ಕಾಂಗ್ರೆಸ್ ಪಕ್ಷದಲ್ಲಿ ಮಿಂಚಿನ ವಾತಾವರಣವಿದೆ. ಗೀತಾಶಿವರಾಜ್‌ಕುಮಾರ್ ಅವರನ್ನು ಖಂಡಿತಾ ಗೆಲ್ಲಿಸುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎನ್.ರಮೇಶ್, ಚಂದ್ರಭೂಪಾಲ್, ಎಸ್.ಟಿ.ಚಂದ್ರಶೇಖರ್, ಎಸ್.ಕೆ.ಮರಿಯಪ್ಪ, ವೈ.ಹೆಚ್.ನಾಗರಾಜ್, ಎಸ್.ಪಿ.ಶೇಷಾದ್ರಿ, ಧೀರರಾಜ್ ಹೊನ್ನಾವಿಲೆ, ಜಿ.ಪದ್ಮನಾಭ್, ಶಿ.ಜು.ಪಾಶ, ಶಿವಾನಂದ್, ಎನ್.ಡಿ.ಪ್ರವೀಣ್‌ಕುಮಾರ್, ಟಿ.ನೇತ್ರಾವತಿ ಸೇರಿದಂತೆ ಹಲವರಿದ್ದರು.