ಸುದ್ದಿಗೋಷ್ಠಿಯಲ್ಲಿ ಕೆ.ಎಸ್.ಈಶ್ವರಪ್ಪ ಹೇಳಿದ್ದು; ಲೋಕಸಭೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದು ಶತಃಸಿದ್ಧ ಕಾಂಗ್ರೆಸ್- ಜೆಡಿಎಸ್ ನಾಯಕರೂ ಬೆಂಬಲಿಸುತ್ತಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಕೆ.ಎಸ್.ಈಶ್ವರಪ್ಪ ಹೇಳಿದ್ದು;

ಲೋಕಸಭೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದು ಶತಃಸಿದ್ಧ

ಕಾಂಗ್ರೆಸ್- ಜೆಡಿಎಸ್ ನಾಯಕರೂ ಬೆಂಬಲಿಸುತ್ತಿದ್ದಾರೆ

ನಾನು ಚುನಾವಣಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನನ್ನ ಸ್ಪರ್ಧೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ ಎಂದು ಕೆ.ಎಸ್.ಈಶ್ವರಪ್ಪ ಮತ್ತೆ ಪುನರುಚ್ಛರಿಸಿದ್ದಾರೆ.
ತಮ್ಮ ಸ್ವಗೃಹದ ಆವರಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಠ ಮಂದಿರಗಳು, ಸರ್ವ ಜಾತಿಯ ಬಾಂಧವರು ಒಳ್ಳೆಯ ಬೆಂಬಲ ನೀಡುವುದಾಗಿ ಭರವಸೆ ನೀಡುತ್ತಿದ್ದಾರೆ ಎಂದರು.

ಬಿಜೆಪಿ ನನ್ನ ತಾಯಿ ಇದ್ದಂತೆ. ನಾನೆಂದೂ ಅದರಿಂದ ದೂರವಾಗಿಲ್ಲ. ಕೆಲವರ ಷಡ್ಯಂತ್ರ ನಡೆದಿದೆ. ನನ್ನ ತಾಯಿಯಿಂದ ದೂರ ಮಾಡುವ ಪ್ರಯತ್ನ ಫಲಿಸಲ್ಲ ಎಂದರು.

ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ. ಇದಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನವರದೂ ಬೆಂಬಲ ಸಿಗುತ್ತಿದೆ. ಹಲವು ನಾಯಕರು ಬೆಂಬಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಹಿಂದೂ ಪರ ಇರುವ ನಾಯಕರನ್ನು ದಮನ ಮಾಡಲಾಗುತ್ತಿದೆ. ಪಕ್ಷನಿಷ್ಠೆಯ ಕಾರಣಕ್ಕಾಗಿ ಸ್ಪರ್ಧಿಸುತ್ತಿದ್ದೇನೆ. ನನಗಾದ ಅನ್ಯಾಯ ಸರಿಪಡಿಸಿಕೊಳ್ಳಬೇಕಿದೆ. ಈ ಚುನಾವಣೆಯಲ್ಲಿ ಶೇ. 100ರಷ್ಟು ಗೆಲುವು ನನ್ನದೇ ಎಂದು ಮತ್ತೆ ಘೋಷಿಸಿದರು.