ಫಾರಂ ಪಡೆದ ಮಧು ಬಂಗಾರಪ್ಪ; ಶುಭ ಹಾರೈಸಿ ಕಳಿಸಿದ ಡಿಕೆಶಿ…

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಅವರ‌ ಸಹೋದರ ಹಾಗೂ ಸಚಿವರಾದ ಮಧು ಬಂಗಾರಪ್ಪ ರವರು ಕೆಪಿಸಿಸಿ ಅಧ್ಯಕ್ಷರೂ ಉಪ ಮುಖ್ಯಮಂತ್ರಿಗಳೂ ಆದ ಡಿ.ಕೆ.ಶಿವಕುಮಾರ್ ರವರ ನಿವಾಸದಲ್ಲಿ ‘ಬಿ’ಫಾರಂ ಸ್ವೀಕರಿಸಿದರು.

ಶಿವಮೊಗ್ಗದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿ ಎಂದು ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಶುಭ ಹಾರೈಸಿದರು.