ಮೃತ ನಂಜುಂಡಪ್ಪ ಅವರ ಮನೆಗೆ ಗೀತಾ ಶಿವರಾಜಕುಮಾರ್ ಭೇಟಿ

ಮೃತ ನಂಜುಂಡಪ್ಪ ಅವರ ಮನೆಗೆ ಗೀತಾ ಶಿವರಾಜಕುಮಾರ್ ಭೇಟಿ

ಶಿವಮೊಗ್ಗ: ತಾಲ್ಲೂಕಿನ ಹರಮಘಟ್ಟ ಗ್ರಾಮದ ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಶನಿವಾರ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ಶಿವಮೊಗ್ಗ- ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ- ಬಿದರಹಳ್ಳಿ ನಡುವೆ ಏ.11ರಂದು ಸಾರಿಗೆ ಬಸ್ ಹಾಗೂ ಓಮಿನಿ ವಾಹನ ನಡುವೆ ನಡೆದ ಅಪಘಾತದಲ್ಲಿ ಹರಮಘಟ್ಟದ ದೊಂಬಳ್ಳರಮನೆ ನಂಜುಂಡಪ್ಪ ಹಾಗೂ ಅವರ ಇಬ್ಬರು ಮೊಮ್ಮಕ್ಕಳು ಸಾವನಪ್ಪಿದ್ದರು. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಅದೇ ಗ್ರಾಮದಲ್ಲಿ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಬಳಿಕ ಪತಿ ಶಿವರಾಜಕುಮಾರ್ ಅವರ ಜೊತೆಗೂಡಿ ಮೃತರ ಮನೆಗೆ ಭೇಟಿ ನೀಡಿ, ಕುಟುಂಬ ಸದಸ್ಯರ ಕಷ್ಟಕ್ಕೆ ಸ್ಪಂದಿಸುವುದಾಗಿ ಭರವಸೆ ನೀಡಿದರು.