ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ-   ಮೋದಿ ಬಗ್ಗೆ ಗೌರವವಿದ್ದರೆ ಕೂಡಲೇ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಕೊಡಿಸಲಿ   ಸಿಎಂ ಮಾತು ನೋವು ತಂದಿದೆ: ರಾಹುಲ್ ಗಾಂಧಿ ಮೊದಲು ಬರಲಿ

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ-
ಮೋದಿ ಬಗ್ಗೆ ಗೌರವವಿದ್ದರೆ ಕೂಡಲೇ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಕೊಡಿಸಲಿ
ಸಿಎಂ ಮಾತು ನೋವು ತಂದಿದೆ: ರಾಹುಲ್ ಗಾಂಧಿ ಮೊದಲು ಬರಲಿ
ಯಡಿಯೂರಪ್ಪ ಅವರಿಗೆ ಮೋದಿ ಬಗ್ಗೆ ಗೌರವ ಇದ್ದರೆ, ಅವರ ಸಿದ್ದಾಂತ ಒಪ್ಪಿಕೊಳ್ಳುವುದಾದರೆ ತಕ್ಷಣವೇ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಬೇಕು ಎಂದು ಲೋಕಸಭಾ ಚುನಾವಣೆ ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಒತ್ತಾಯಿಸಿದರು.
ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ನಿವಾಸದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನರೇಂದ್ರ ಮೋದಿ ಅವರು ಸೋನಿಯಾ ಗಾಂಧಿ ಅವರ ಕುಟುಂಬ ರಾಜಕೀಯವನ್ನು ಟೀಕಿಸಿದ್ದಾರೆ. ಈ ವೇಳೆ ಅವರ ಪಕ್ಕದಲ್ಲೇ ಯಡಿಯೂರಪ್ಪ ಅವರು ಕೂತಿದ್ದಾರೆ. ಇವರಿಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಬೇಕು. ಇಲ್ಲ, ಮೋದಿ ಸಭೆಗೆ ಯಡಿಯೂರಪ್ಪ ಅವರು ಹೋಗಬಾರದು ಎಂದು ಹರಿಹಾಯ್ದರು.
ರಾಜ್ಯದಲ್ಲಿ ಅಷ್ಟೇ ಅಲ್ಲ ದೇಶದಲ್ಲೂ ಬಿಜೆಪಿ ಹೆಚ್ಚು ಮತಗಳು ಬರುತ್ತಿದ್ದೇವೆ ಎಂದರೆ ಅದಕ್ಕೆ ನರೇಂದ್ರ ಮೋದಿ ಕಾರಣ. ರಾಜ್ಯದಲ್ಲೂ ಮೋದಿ ಮುಖ ನೋಡಿಕೊಂಡು ಜನ ಬಿಜೆಪಿಗೆ ಮತ ಕೊಡುತ್ತಿದ್ದಾರೆ ವಿನಾ: ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದಾರೆ ಎಂದು ಯಾರೂ ಕೂಡ ಮತ ಹಾಕುತ್ತಿಲ್ಲ. ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಎಷ್ಟು ಬೂತ್‌ ಇದೆ ಎಂಬುದೇ ವಿಜಯೇಂದ್ರರಿಗೆ ಗೊತ್ತಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಕೋಟ್ಯಾಂತರ ರುಪಾಯಿ ಹಣ ಸುರಿದರೂ ಅವರಿಗೆ 60 ಸಾವಿರ ಲೀಡ್‌ನಿಂದ ಕೇವಲ 10 ಲೀಡ್‌ ಬಂದರು. ಅಂತರ ಯಾಕೆ ಕಡಿಮೆಯಾಗಿದೆ ಎಂದು ಪ್ರಶ್ನಿಸಿದರು.
ಆದಷ್ಟು ಬೇಗಾ ಶಿವಮೊಗ್ಗಕ್ಕೆ ರಾಹುಲ್‌ ಗಾಂಧಿ ಬರಲಿ:
ರಾಹುಲ್‌ ಗಾಂಧಿ ಶಿವಮೊಗ್ಗಕ್ಕೆ ಬರಬೇಕು ಎಂಬುದು ನನ್ನ ಆಸೆ. ಅವರು ಎಲ್ಲಿಲ್ಲಿ ಕಾಲಿಟ್ಟದ್ದಾರೋ ಅಲ್ಲೆಲ್ಲ ಸೋತಿದ್ದಾರೆ.ಮೀಗ ಶಿವಮೊಗ್ಗಕ್ಕೆ ಬರುತ್ತಾರೆ ಎಂದರೆ ದಯವಿಟ್ಟು ಬೇಗಾ ಕರೆಸಿ ಎಂದು ಈಶ್ವರಪ್ಪ ವ್ಯಂಗ್ಯವಾಡಿದರು.
ನನಗೆ ಸಿನಿಮಾ ನಟರ ಬಗ್ಗೆ ಅಪಾರ ಗೌರವ ಇದೆ. ನಟರನ್ನು ನೋಡಲು ಜನರನ್ನು ಬರುತ್ತಾರೆ ವಿನಾ ಅವರು ಬಂದ ಮಾತ್ರಕ್ಕೆ ಕಾಂಗ್ರೆಸ್‌ಗೆ ಮತ ಕೊಡುವುದಿಲ್ಲ. ಯಡಿಯೂರಪ್ಪ ಅವರೇ ರಾಘವೇಂದ್ರ ಅವರನ್ನು ಗೆಲ್ಲಿಸಿಕೊಡುವ ಸಲುವಾಗಿ ಗೀತಾ ಅವರನ್ನು ಇಲ್ಲಿಗೆ ಹಾಕಿಸಿಕೊಂಡು ಬಂದಿದ್ದಾರೆ. ಹೀಗಾಗಿ ಕಾಂಗ್ರೆಸ್‌, ಬಿಜೆಪಿ ಪರಸ್ಪರ ಟೀಕೆ ಮಾಡಿಕೊಳ್ಳುವುದಿಲ್ಲ. ಇಬ್ಬರು ಸೇರಿ ನನ್ನನ್ನು ಟೀಕೆ ಮಾಡುತ್ತಿದ್ದಾರೆ. ಇವರಿಬ್ಬರ ಸೋಲು ಖಚಿವಾಗಿದೆ ಎಂದರು.
ಒಂದು ರಾಜಕೀಯ ಪಕ್ಷ ಅಣ್ಣಮಲೈ ಅವರನ್ನು ಕರೆಸಿ ಪ್ರಚಾರ ಮಾಡಿದ್ದು ತಪ್ಪಲ್ಲ. ಆದರೆ, ಅವರನ್ನು ನೋಡಲು ಜನ ಹೋಗಲಿಲ್ಲ. ತಮಿಳು ಬೆಂಬಲ ಅವರಿಗೆ ಇಲ್ಲ ಎಂಬುದು ಬಿಜೆಪಿಗೆ ಗೊತ್ತಾಗಿದೆ. ನನ್ನ ಜೀವನದಲ್ಲಿ ಪಕ್ಷದ ನಾಯಕರು ಹೇಳಿದ ಯಾವ ಮಾತನ್ನು ನಾನು ಮೀರಿಲ್ಲ. ಅವತ್ತು ಸಂಗೊಳ್ಳಿ ರಾಯಣ್ಣ ಬ್ರೀಗೇಡ್‌ ಬಿಟ್ಟಿದ್ದರ ಪರಿಣಾಮ ಹಿಂದುಳಿದವರು, ದಲಿತರು ಎಲ್ಲ ಕಾಂಗ್ರೆಸ್‌ಗೆ ಹೋಗಿದ್ದಾರೆ ಎಂದು ಟೀಕಿಸಿದರು.
ಸಿಎಂ ಮಾತು ನೋವು ತಂದಿದೆ:
ನಮ್ಮ ಸರ್ಕಾರ ಅಲ್ಪಸಂಖ್ಯಾತರಿಗೆ ಎಲ್ಲ ಸವಲತ್ತು ಕೊಡುತ್ತೇವೆ. ಸಲವತ್ತು ಕೊಡುವುದಕ್ಕೆ ಹಿಂಜರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ನನಗೆ ನೋವು ಕೊಟ್ಟಿದೆ. ಹಿಂದು ಯುವತಿ ನೇಹಾ ಹತ್ಯೆಯಾದಾಗ ಸಿಎಂ ಹಾಗೂ ಗೃಹ ಸಚಿವರು ಇದು ಲವ್‌ ಜಿಹಾದ್‌ ಅಲ್ಲ, ವೈಯಕ್ತಿಕ ಕೊಲೆಎಂದು ಹಗುರವಾಗಿ ಹೇಳಿಕೆ ಕೊಟ್ಟರು. ಪ್ರತಿಭಟನೆ ಬಳಿಕ ಸಿಐಡಿ ತನಿಖೆ ಕೊಟ್ಟಿದ್ದಾರೆ. ವರದಿ ಕೊಡುವುದಕ್ಕಿಂತ ಮುನ್ನವೇ ಸಿಎಂ, ಸಚಿವರು ಈ ರೀತಿ ಹೇಳಿಕೆ ಕೊಟ್ಟರೆ, ಸಿಐಡಿ ಸಂಸ್ಥೆ ಇದಕ್ಕೆ ವ್ಯತಿರಿಕ್ತ ಹೇಳಿಕೆ ಹೇಗೆ ಕೊಡುತ್ತದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.
ಸಚಿವ ಸಂತೋಷ್‌ ಲಾಡ್‌ ಅವರು ನೇಹಾ ಅವರ ಮನೆ ಪ್ರವಾಸಿ ತಾಣವಾಗಿದೆ ಎಂದು ಹೇಳಿಕೆ ಕೊಟ್ಟರು. ಈಗ ಸಿಎಂ ಸಿದ್ದಾರಮಯ್ಯ ಹೋಗಿದ್ದಾರೆ. ಅವರೇನೂ ಪಿಕ್‌ನಿಕ್‌ ಹೋಗಿದ್ದಾರಾ? ಹಿಂದು ಸಮಾಜದ ಜಾಗೃತಿ ಹೆಚ್ಚಾದ ಬಳಿಕ ಚುನಾವಣೆಯಲ್ಲಿ ನಮಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಈಗ ಭೇಟಿ ಕೊಡುವ ಪ್ರಯತ್ನ ಮಾಡಿದ್ದಾರೆ. ಸರ್ವಜನಾಂಗ ಶಾಂತಿ ತೋಟ ನಮ್ಮ ಗುರಿ ಎನ್ನುವ ನೀವು ಯಾಕೆ ಮುಸ್ಲಿಂ ತೃಷ್ಟಿಕರಣ ಮಾಡುತ್ತಿದ್ದೀರಿ, ಇದನ್ನು ಮೊದಲು ಬಿಡಿ ಎಂದು ಕಾಂಗ್ರೆಸ್‌ ನಾಯಕರಿಗೆ ಕುಟುಕಿದರು.
8 ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್‌ ಸೋಲುತ್ತದೆ ಎಂದು ಕಾಂಗ್ರೆಸ್‌ ನಾಯಕರೇ ಹೇಳುತ್ತಿದ್ದಾರೆ. ಹಾಗಾಗಿ ನಮ್ಮ ಓಟನ್ನು ಕಾಂಗ್ರೆಸ್‌ಗೆ ಕೊಡಲ್ಲ, ರಾಘವೇಂದ್ರ ಅವರಿಗೂ ಕೊಡಲು ನಮಗೆ ಇಷ್ಟ ಇಲ್ಲ. ನಿಮಗೆ ಕೊಡುತ್ತೇವೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಹೇಳುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಯಾರ್ಯಾರು ನನಗೆ ಬೆಂಬಲ ಕೊಡುತ್ತಿದ್ದಾರೆ ಎಂದು ಹೇಳಿದರು,
ಗೋಪಾಲ್‌, ಮಂಜುನಾಥ್‌, ರಾಜೇಂದ್ರ ಅವರಂತ ತಮಿಳು ನಾಯಕರು ಸೇರಿ ಭದ್ರಾವತಿಯಲ್ಲಿ ಎಂದೆಂದೂ ನಡೆದ ತಮಿಳು ಸಮಾಜದ ಸಮಾವೇಶ ನಡೆಯಿತು. ಇದರ ಬಳಿಕ ಬಿಜೆಪಿ ನಾಯಕರಿಗೆ ಕಣ್ಣು ಬಿದ್ದು, ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ, ಗೋಪಾಲ್‌, ಮಂಜುನಾಥ್‌ ಎಲ್ಲರೂ ಬಿಜೆಪಿ ಸೇರಿದ್ದಾಂತೆ ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಅಣ್ಣಮಲೈ ಅವರನ್ನು ಭೇಟಿ ಯಾಗಿದ್ದಾರೆ ಹೊರೆತು ಅವರು ಎಂದೂ ಬಿಜೆಪಿ ಅಭ್ಯರ್ಥಿ ಜೊತೆ ಹೋಗಿಲ್ಲ. ತಮಿಳು ಸಮಾಜದವರು ಎಂದಿಗೂ ನನಗೆ ಬೆಂಬಲ ನೀಡುತ್ತಾ ಬಂದಿದ್ದಾರೆ, ಮುಂದೆಯೂ ನೀಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ತಮಿಳು ಸಮಾಜ ಮುಖಂಡರಾದ ಗೋಪಾಲ್‌, ಮಂಜುನಾಥ್‌, ರಾಜೇಂದ್ರ, ಮಾಜಿ ಮೇಯರ್‌ ಸುವರ್ಣ ಶಂಕರ್‌, ಲತಾ ಗಣೇಶ್‌, ಆರತಿ ಆ.ಮ.ಪ್ರಕಾಶ್‌, ವಿಶ್ವಾಸ್‌ , ರಾಜಣ್ಣ, ವಿದ್ಯಾ ಪ್ರೇಮ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.
——————
ಶಿಕಾರಿಪುರ ತಾಲೂಕಿನ ಹಿತ್ಲಾ ಗ್ರಾಮದಲ್ಲಿ ನಿರೀಕ್ಷೆಗೂ ಮೀರಿ ಜನ ಸೇರಿ ನಿನ್ನೆ ಬೃಹತ್‌ ಸಮಾವೇಶ ನೆರವೇರಿಸಲಾಯಿತು. ವೀರಶೈವ, ಕುರುಬ, ಲಂಬಾಣಿ, ದಲಿತ, ಹಿಂದುಳಿದ ಸಮಾಜ ಸೇರಿದಂತೆ ಎಲ್ಲ ಸಮಾಜದ ಪ್ರಮುಖರು ಸೇರಿ ದೊಡ್ಡ ಸಮಾವೇಶ ಮಾಡಿದ್ದಾರೆ. ಇದು ಶಿಕಾರಿಪುರ ತಾಲೂಕಿನಲ್ಲಿ ನಡೆದ ಮೂರನೇ ಸಾರ್ವಜನಿಕ ಸಭೆ. ಏ.27ರಂದು ಆನಂದಪುರ, ಸಾಗರ, ಬೃಹತ್‌ ಸಮಾವೇಶ, ಏ.28ರಂದು ಸಂಜೆ 5 ಕ್ಕ್ಕೆ ಶಂಕರಘಟ್ಟ ಭಾಗದಲ್ಲಿ ಸಮಾವೇಶ, ಏ.29ರಂದು ಸೋಮವಾರ ತೋಗರ್ಸಿ, ಶಿರಾಳಕೊಪ್ಪ ಭಾಗದಲ್ಲೂ ದೊಡ್ಡ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಏ.30ರಂದು ಬೆಳಗಿನಿಂದ ಸಂಜೆವರೆಗೆ ತೀರ್ಥಹಳ್ಳಿ ತಾಲೂಕಿನ ಎಲ್ಲ ಜಿಪಂ ಕ್ಷೇತ್ರದಲ್ಲಿ ಸಮಾವೇಶ ನಡೆಯಲಿದೆ. ಮೇ 1ರಂದು ಬೆಳಗ್ಗೆಯಿಂದ ಸಂಜೆವರಗೆ ಬೈಂದೂರಿನಲ್ಲಿ ಸಮಾವೇಶ ನಡೆಯಲಿದೆ. ಹೀಗೆ ಎಲ್ಲ ಕ್ಷೇತ್ರದಲ್ಲಿ ನಿರೀಕ್ಷೆಗೆ ಮೀರಿ ಬೆಂಬಲ ನೀಡುತ್ತಿದ್ದಾರೆ ಎಂದು ಕೆ.ಎಸ್‌.ಈಶ್ವರಪ್ಪ ತಿಳಿಸಿದರು.