ಜೂ. 23 ರಂದು ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಮೂರು ಮುಖ್ಯ ಕಾರ್ಯಕ್ರಮಗಳು; ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ

ಜೂ. 23 ರಂದು ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಮೂರು ಮುಖ್ಯ ಕಾರ್ಯಕ್ರಮಗಳು; ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಜೂ.23ರಂದು ಕುವೆಂಪು ರಂಗ ಮಂದಿರದಲ್ಲಿ ನೂತನವಾಗಿ ಆಯ್ಕೆಯಾಗಿರುವ ಜಿಲ್ಲೆಯ ಜನಪ್ರತಿನಿಧಿಗಳಿಗೆ ಅಭಿನಂದನಾ ಕಾರ್ಯಕ್ರಮ, ಸರ್ಕಾರಿ ನೌಕರರ ನವೀಕೃತ ಭವನದ ಉದ್ಘಾಟನೆ, ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ ತಿಂಗಳಲ್ಲಿ ರಾಜ್ಯ ಕ್ರೀಡಾಕೂಟ ಶಿವಮೊಗ್ಗದಲ್ಲೇ ನಡೆಯಲುದ್ದೇಶಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ.
7 ನೇ ವೇತನ ಆಯೋಗದ ಜಾರಿ ಬಗ್ಗೆ ಮುಂದಿನ ಕ್ಯಾಬಿನೆಟ್ ನಲ್ಲಿ ಚರ್ಚೆಯಾಗಿ ಜಾರಿಯಾಗಬಹುದು. ಜೂನ್ ಜುಲೈನಲ್ಲಿ ಜಾರಿಯಾಗಬಹುದಾದ ವಿಶ್ವಾಸವಿದೆ. ವೇಗವಾಗಿ ರಾಜ್ಯ ಸರ್ಕಾರ ಈ ಕೆಲಸ ಮಾಡಬೇಕು ಎಂದರು.
10,000 ಜನ ಸೇರಬಹುದಾದ ಸರ್ಕಾರಿ ನೌಕರರ ಕಲ್ಯಾಣ ಮಂಟಪ ಸದ್ಯದಲ್ಲೇ ಲೋಕಾರ್ಪಣೆಗೊಳ್ಳಲಿದೆ. ಇದು ದೇಶದಲ್ಲಿಯೇ ಅತ್ಯಂತ ದೊಡ್ಡ ಕಲ್ಯಾಣ ಮಂಟಪ ಎಂದರು.