ಶಿವಮೊಗ್ಗದ ಬಸ್ ನಿಲ್ದಾಣದ 5 ಕುಖ್ಯಾತ ಕಳ್ಳಿಯರು ಅಂದರ್…7 ಪ್ರಕರಣ- 8.13 ಲಕ್ಷ ರೂ ಮೌಲ್ಯದ ಬಂಗಾರ ವಶಪಡಿಸಿಕೊಂಡ ದೊಡ್ಡಪೇಟೆ ಪೊಲೀಸರು!

ಶಿವಮೊಗ್ಗದ ಬಸ್ ನಿಲ್ದಾಣದ 5 ಕುಖ್ಯಾತ ಕಳ್ಳಿಯರು ಅಂದರ್…

7 ಪ್ರಕರಣ- 8.13 ಲಕ್ಷ ರೂ ಮೌಲ್ಯದ ಬಂಗಾರ ವಶಪಡಿಸಿಕೊಂಡ ದೊಡ್ಡಪೇಟೆ ಪೊಲೀಸರು!

ಕಳೆದ ಜೂನ್ 29 ರಂದು ಶಿವಮೊಗ್ಗದ ಜೆ. ಸಿ. ನಗರದ ಮಹಿಳೆಯೊಬ್ಬರು ತಮ್ಮ ಕುಟುಂಬದೊಂದಿಗೆ ಸಂಬಂಧಿಕರ ಮದುವೆಗೆ ದಾವಣಗೆರೆಗೆ ಹೋಗಲು ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾಂಡ್ನಲ್ಲಿ ಬಸ್ ಹತ್ತಿ, ಫೋನ್ ಮಾಡಲು ವ್ಯಾನಿಟಿ ಬ್ಯಾಗ್ ಅನ್ನು ತೆಗೆದು ನೋಡಿದಾಗ ಅದರಲ್ಲಿಟ್ಟಿದ್ದ ಬಂಗಾರದ ಆಭರಣಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0164/2024 ಕಲಂ 379 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದಲ್ಲಿ ಕಳುವಾದ ಮಾಲು ಮತ್ತು ಆರೋಪಿತ ಪತ್ತೆಗಾಗಿ ಎಸ್ ಪಿ ಮಿಥುನ್ ಕುಮಾರ್ ಜಿ.ಕೆ ರವರ ನೇತೃತ್ವದಲ್ಲಿ, ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಮತ್ತು ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 2 ರ ಮಾರ್ಗದರ್ಶನದಲ್ಲಿ, ಬಾಬು ಆಂಜಿನಪ್ಪ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ – ಎ ಉಪ ವಿಭಾಗರವರ ಮೇಲ್ವಿಚಾರಣೆಯಲ್ಲಿ ರವಿ ಪಾಟೀಲ್, ಪಿ.ಐ.ದೊಡ್ಡಪೇಟೆ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ, ನಾಗರಾಜ್ ಎಎಸ್ಐ, ಹೆಚ್ ಸಿ ರವರಾದ ಪಾಲಾಕ್ಷ ನಾಯ್ಕ, ಲಚ್ಚಾನಾಯ್ಕ್, ಸಿಪಿಸಿ ರವರಾದ ಚಂದ್ರನಾಯ್ಕ, ಗುರುನಾಯ್ಕ, ನಿತಿನ್, ಪುನೀತ್ರಾವ್ ಮತ್ತು ಪ್ರಕಾಶ್ ಹಾಗೂ ಮಹಿಳಾ ಸಿಬ್ಬಂದಿ ದೀಪ ಎಸ್ ಹುಬ್ಬಳಿ, ಪೂಜಾ, ಸುಮಿತ್ರಾಬಾಯಿ, ಲಕ್ಷ್ಮಿ ರವರನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಲಾಗಿತ್ತು.
ಈ ತನಿಖಾ ತಂಡವು ಪ್ರಕರಣದ ಆರೋಪಿತರಾದ ಶಾಂತಿ @ ಕರ್ಕಿ, 31 ವರ್ಷ, ಹನುಮಂತನಗರ, ಹೊಸಮನೆ ಭದ್ರಾವತಿ, ಮೀನಾಕ್ಷಿ, 38 ವರ್ಷ, ಹನುಮಂತ ನಗರ, ಹೊಸಮನೆ ಭದ್ರಾವತಿ, ಸಾವಿತ್ರಿ @ ಬಾಬಾ,* 29 ವರ್ಷ, ಹನುಮಂತ ನಗರ, ಹೊಸಮನೆ ಭದ್ರಾವತಿ, ದುರ್ಗಾ @ ಸಣ್ಣದುರ್ಗಾ, 29 ವರ್ಷ, ಭೋವಿ ಕಾಲೋನಿ, ಭದ್ರಾವತಿ, ಸುಶೀಲಮ್ಮ, 66 ವರ್ಷ, ಹನುಮಂತ ನಗರ, ಹೊಸಮನೆ ಭದ್ರಾವತಿ ಇವರನ್ನು ದಸ್ತಗಿರಿ ಮಾಡಿ ಸದರಿಯವರಿಂದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡಿದ ಒಟ್ಟು 07 ಪ್ರಕರಣಗಳಿಗೆ ಸಂಬಂಧಿಸಿದಂತೆ ಅಂದಾಜು ಮೌಲ್ಯ 8,13,000/- ರೂ ಗಳ 122 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.

ಈ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ ಅಭಿನಂದಿಸಿದ್ದಾರೆ.