ಭದ್ರಾವತಿ ಬಿಳಕಿ ತಾಂಡಾದಲ್ಲಿ ಅಂದರ್- ಬಾಹರ್; ಪೊಲೀಸ್ ದಾಳಿ*

*ಭದ್ರಾವತಿ ಬಿಳಕಿ ತಾಂಡಾದಲ್ಲಿ ಅಂದರ್- ಬಾಹರ್; ಪೊಲೀಸ್ ದಾಳಿ*

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಕಿ ತಾಂಡಾದಲ್ಲಿ ಕೆಲವು ಜನರು ಸೇರಿಕೊಂಡು ಕಾನೂನು ಬಾಹರವಾಗಿ ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿ 6 ಜನರನ್ನು ಬಂಧಿಸಿದ್ದಲ್ಲದೇ, ಆಟಕ್ಕೆ ಬಳಸಿದ್ದ ಹಣವನ್ನೂ ವಶಕ್ಕೆ ಪಡೆದಿರುವ ಘಟನೆ ಭಾನುವಾರ ನಡೆದಿದೆ.
ಎಸ್ ಪಿ ಮಿಥುನ್ ಕುಮಾರ್ ಜಿ.ಕೆ, ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಕಾರಿಯಪ್ಪ ಎ.ಜಿ,* ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರವರ ಮಾರ್ಗದರ್ಶನದಲ್ಲಿ, ಗಜಾನನ ವಾಮನ ಸುತಾರ ಪೊಲೀಸ್ ಉಪಾಧೀಕ್ಷಕರು, ಭದ್ರಾವತಿ ಉಪ ವಿಭಾಗ ಪ್ರಭಾರ ರವರ ಮೇಲ್ವಿಚಾರಣೆಯಲ್ಲಿ, ಜಗದೀಶ್ ಹಂಚಿನಾಳ್,* ಪಿ.ಐ. ಮತ್ತು ಶಿಲ್ಪಾ ಎನ್ ಪಿ.ಎಸ್.ಐ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂದಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿನಡೆಸಿ, ಇಸ್ಪೀಟು ಜೂಜಾಟ ಆಡುತ್ತಿದ್ದ 08 ಜನರನ್ನು ದಸ್ತಗಿರಿ* ಮಾಡಿ, ಜೂಜಾಟದಲ್ಲಿ ಪಣವಾಗಿಟ್ಟಿದ್ದ ರೂ 6,600 ನಗದು ಹಣ ಮತ್ತು ಇಸ್ಪೀಟು ಎಲೆಗಳನ್ನು ಅಮಾನತ್ತು ಪಡಿಸಿಕೊಂಡು, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0138/2024 ಕಲಂ 87 ಕೆ ಪಿ ಕಾಯ್ದೆ* ರೀತ್ಯಾ ಪ್ರಕರಣ ದಾಖಲಿಸಿದ್ದಾರೆ.