ರಾಜ್ಯ ಬಾಲಭವನ ಅಧ್ಯಕ್ಷರ ಭೇಟಿಯಿಂದ ಆಗಿದ್ದೇನು?ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್ ಹೇಳಿದ್ದೇನು?

ರಾಜ್ಯ ಬಾಲಭವನ ಅಧ್ಯಕ್ಷರ ಭೇಟಿಯಿಂದ ಆಗಿದ್ದೇನು?

ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್ ಹೇಳಿದ್ದೇನು?

ರಾಜ್ಯ ಬಾಲಾಭವನ ಅಧ್ಯಕ್ಷರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ಕಾಂಗ್ರೆಸ್ ಮುಖಂಡರಾದ ಹೆಚ್.ಸಿ.ಯೋಗೇಶ್ ರವರೊಂದಿಗೆ ರಾಜ್ಯ ಬಾಲ ಭವನ ಸೊಸೈಟಿಯ ಅನುದಾನದಲ್ಲಿ ಮಹಾತ್ಮಾ ಗಾಂಧಿ ಪಾರ್ಕ್ ನಲ್ಲಿ ನಡೆಯುತ್ತಿರುವ ಮಕ್ಕಳ ಪುಟಾಣಿ ರೈಲು, ಈಜು ಕೊಳ ನಿರ್ವಹಣೆ ಪರಿಶೀಲಿಸಿ ಇವುಗಳ ಉತ್ತಮ ನಿರ್ವಹಣೆ ಹಾಗೂ ಉನ್ನತೀಕರಣದ ಬಗ್ಗೆ ಮಹಾ ನಗರ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಮಕ್ಕಳ ಉಪಯೋಗಕ್ಕೆ ಯೋಗ್ಯವಾಗುವಂತೆ ಪಾಲಿಕೆ CSR ಅನುದಾನ ಬಳಸಿಕೊಳ್ಳಲು ಸೂಚಿಸಿದರು. ತದನಂತರ, ಮಹಿಳಾ ಮತ್ತು ಮಕ್ಕಳ ಉಪ ನಿರ್ದೇಶಕರ ಕಚೇರಿಯಲ್ಲಿ ಬಾಲ ಭವನ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿ ಜಿಲ್ಲಾ ಮತ್ತು ತಾಲ್ಲೂಕು ಬಾಲ ಭವನ ನಿರ್ಮಾಣ ಮಾಡಲು ಕನಿಷ್ಠ ಅರ್ಧ ಎಕರೆ ನಿವೇಶನ ರಾಜ್ಯ ಬಾಲ ಭವನ ಸೊಸೈಟಿ ಹೆಸರಿಗೆ ಜಿಲ್ಲಾಧಿಕಾರಿಯವರಿಂದ ಮಂಜೂರಾತಿ ಪಡೆಯಲು ಇಲಾಖಾ ಅಧಿಕಾರಿಗಳಿಗೆ ಸೂಚಿಸಿ,ಜಿಲ್ಲಾ ಬಾಲ ಭವನ ಕಾರ್ಯಕ್ರಮ ಸಂಯೋಜಕರ ಮೂಲಕ ನಿರಂತರವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲು ತಿಳಿಸಿದರು.

ಈ ಸಂದರ್ಭದಲ್ಲಿ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಿ. ಹೆಚ್. ಕೃಷ್ಣಪ್ಪ, ಇಲಾಖಾ ಅಧಿಕಾರಿಗಳು, ಮಹಾ ನಗರ ಪಾಲಿಕೆ, ಶಿಕ್ಷಣ, ಯುವ ಜನ ಕ್ರೀಡಾ ಇಲಾಖೆ ಅಧಿಕಾರಿಗಳು ಹಾಜರಿದ್ದರು. ನಂತರ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿ ಪರಿಶೀಲಿಸಿ, ಇಲಾಖಾ ಸಂಕೀರ್ಣದಲ್ಲಿ ಬಾಲ ಭವನ ಆಡಿಟೋರಿಯಂ, ಮಕ್ಕಳ ಉದ್ಯಾನವನ ನಿರ್ಮಾಣ ಮಾಡುವ ಸಾಧ್ಯತೆ ಬಗ್ಗೆ ನಿವೇಶನಗಳ ಸ್ಥಳ ಪರಿಶೀಲನೆ ನಡೆಸಿದರು.