ಉಳ್ಳಿ ಫೌಂಡೇಶನ್ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟು ಹಬ್ಬ ಆಚರಣೆ

ಉಳ್ಳಿ ಫೌಂಡೇಶನ್ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟು ಹಬ್ಬ ಆಚರಣೆ

 ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಹುಟ್ಟು ಹಬ್ಬದ ಪ್ರಯುಕ್ತ ಉಳ್ಳಿ ಫೌಂಡೇಶನ್ ವತಿಯಿಂದ ಶಿಕಾರಿಪುರದ ದೇವರಾಜ್ ಅರಸು ನಗರದ ಉರ್ದು ಶಾಲೆಯ ಮಕ್ಕಳಿಗೆ ಪುಸ್ತಕ, ಪೆನ್ನು ಹಾಗು ಲೇಖನ ಸಾಮಾಗ್ರಿಗಳನ್ನು ವಿತರಣೆ ಮಾಡುವ ಮೂಲಕ ಅರ್ಥ ಪೂರ್ಣವಾಗಿ ಹುಟ್ಟು ಹಬ್ಬ ಆಚರಿಸಲಾಯಿತು.*

*ಈ ಸಂದರ್ಭದಲ್ಲಿ ಮಾತನಾಡಿದ ಉಳ್ಳಿ ಫೌಂಡೇಶನ್ ಅದ್ಯಕ್ಷರು ಹಾಗು ಪುರಸಭಾ ಸದಸ್ಯರಾದ ಉಳ್ಳಿ ದರ್ಶನ್ ರವರು, ನಮ್ಮ ನಾಯಕರು, ಗ್ಯಾರೆಂಟಿಗಳನ್ನು ಜಾರಿ ಮಾಡುವ ಮೂಲಕ ನುಡಿದಂತೆ ನಡೆದ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಹುಟ್ಟು ಹಬ್ಬವನ್ನು ಇಂದು ಅರ್ಥ ಪೂರ್ಣವಾಗಿ ಆಚರಿಸಿದ್ದು, ಸರ್ಕಾರಿ ಉರ್ದು ಇಂಗ್ಲೀಷ್ ಹಿರಿಯ ಪ್ರಾರ್ಥಮಿಕ ಶಾಲೆಯ ಸುಮಾರು 100 ಮಕ್ಕಳಿಗೆ ಪುಸ್ತಕ-ಪೆನ್ನು ಹಾಗು ಲೇಖನಿ ಸಾಮಾಗ್ರಿಗಳನ್ನು ವಿತರಿಸಿದ್ದು, ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಅತಿ ಹೆಚ್ಚು ಸೌಲಭ್ಯಗಳನ್ನು ನೀಡಿ ಅದರಲ್ಲು ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡುತ್ತಿದ್ದಾರೆ. ಮಕ್ಕಳು ಅದರ ಸದುಪಯೋಗ ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ವಿನಂತಿಸಿದರು.*

*ಈ ವೇಳೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಕುಮಾರ್ ನಾಯಕ್, ರಾಜು ಉಡುತಡಿ , ಗಣರೆಶ್ ಕೆಂಗಟ್ಟಿ ಶಶಾಂಕ್, ಅರುಣ್, ಶಿಕ್ಷಕರು, ಎಸ್.ಡಿ.ಎಂ.ಸಿ ಅದ್ಯಕ್ಷರು, ಸದಸ್ಯರು ಮುಂತಾದವರು ಪಾಲ್ಗೊಂಡಿದ್ದರು.*