ರೌಡಿಶೀಟರ್ ಭವಿತ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದೇಕೆ?ಎಸ್ ಪಿ ಮಿಥುನ್ ಕುಮಾರ್ ಹೇಳೋದೇನು?ಸಬ್ ಇನ್ಸ್ ಪೆಕ್ಟರ್ ಸುನೀಲ್ ಇದ್ದಾಗ ಆಗಿದ್ದೇನು?

ರೌಡಿಶೀಟರ್ ಭವಿತ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದೇಕೆ?

ಎಸ್ ಪಿ ಮಿಥುನ್ ಕುಮಾರ್ ಹೇಳೋದೇನು?

ಸಬ್ ಇನ್ಸ್ ಪೆಕ್ಟರ್ ಸುನೀಲ್ ಇದ್ದಾಗ ಆಗಿದ್ದೇನು?

ಶಿವಮೊಗ್ಗದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿರುವ ಭವಿತ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ.ಘಟನೆ ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭವಿತ್ ಮೇಲೆ 7 ಪ್ರಕರಣಗಳಿವೆ. ಕೊಲೆ, ದರೋಡೆ, ಕೊಲೆಯತ್ನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ.

ಜಯನಗರ ಠಾಣೆ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಇಬ್ಬರು ಸ್ನೇಹಿತರೊಂದಿಗೆ ಸಾರ್ವಜನಿಕವಾಗಿ ದರೋಡೆ ಪ್ರಕರಣದಲ್ಲಿ ತೊಡಗಿದ್ದ. ಇಂದು ವಿನೋಬನಗರ ಠಾಣೆಯ ಪಿಎಸ್ ಐ ಸುನೀಲ್ ಈತನನ್ನು ಪತ್ತೆ ಹಚ್ಚಿದ್ದು, ಬಂಧಿಸಿ ಕರೆತರುವಾಗ ಆರೋಪಿ ಭವಿತ್ ಹಲ್ಲೆ ಮಾಡಿದ್ದಾನೆ.

ಆಗ ಸ್ವರಕ್ಷಣೆಗಾಗಿ ಪಿಎಸ್ ಐ ಸುನೀಲ್ ಆರೋಪಿ ಭವಿತ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿಯನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.