ರೈಲ್ವೇ ಸಚಿವ ವಿ.ಸೋಮಣ್ಣ ನಾಳೆ ಶಿವಮೊಗ್ಗಕ್ಕೆವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ರೈಲ್ವೇ ಸಚಿವ ವಿ.ಸೋಮಣ್ಣ ನಾಳೆ ಶಿವಮೊಗ್ಗಕ್ಕೆ

ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಮಾನ್ಯ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಸಚಿವರಾದ  ವಿ ಸೋಮಣ್ಣ ಅವರು ಸೆಪ್ಟೆಂಬರ್ 26ರಂದು ಶಿವಮೊಗ್ಗಕ್ಕೆ ಭೇಟಿ ನೀಡಿ, ಸಂಸದ ಬಿ. ವೈ. ರಾಘವೇಂದ್ರ ಅವರೊಂದಿಗೆ ಈ ಪ್ರದೇಶದಲ್ಲಿನ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ವೀಕ್ಷಿಸುವರು.

ಬೆಳಿಗ್ಗೆ 11:30 ಘಂಟೆಗೆ ಕೋಟೆಗಂಗೂರು ಕೋಚಿಂಗ್ ಟರ್ಮಿನಲ್‌ನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸುವರು.
ನಂತರ ಅವರು ಶಿವಮೊಗ್ಗ, ಮಲೆನಾಡು ಭಾಗದಾದ್ಯಂತ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳು ಮತ್ತು ಕಾಮಗಾರಿಗಳ ಕುರಿತು ಚರ್ಚಿಸಲು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೈಋತ್ಯ ರೈಲ್ವೆ ಅಧಿಕಾರಿಗಳು, ಸಾರ್ವಜನಿಕ ಪ್ರತಿನಿಧಿಗಳು ಮತ್ತು ಸ್ಥಳೀಯ ಆಡಳಿತದೊಂದಿಗೆ ನಡೆಯುವ ಸಭೆಯಲ್ಲಿ ಭಾಗವಹಿಸುವರು.

ಸಭೆಯ ನಂತರ ಸಚಿವರು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸುವರು.