ಹಂಚಿನ ಸಿದ್ದಾಪುರ ಗ್ರಾಮದಲ್ಲಿ ಸಚಿವ ಮಧು ಬಂಗಾರಪ್ಪ*

*ಹಂಚಿನ ಸಿದ್ದಾಪುರ ಗ್ರಾಮದಲ್ಲಿ ಸಚಿವ ಮಧು ಬಂಗಾರಪ್ಪ*

ಶಾಲಾ ಶಿಕ್ಷಣ ಹಾಗು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್, ಮಧು ಬಂಗಾರಪ್ಪ ಇಂದು ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮಕ್ಕೆ ಭೇಟಿನೀಡಿದರು.

ಕುಸಿದು ಬಿದ್ದ ಭದ್ರಾ ಕಾಲುವೆಯ “ಜನ ಸಂಪರ್ಕ ಸೇತುವೆ”ಯನ್ನು ವೀಕ್ಷಿಸಿದ ಅವರು, ಸ್ಥಳೀಯ ಗ್ರಾಮಸ್ಥರು ತಮ್ಮ ತೋಟ ಹಾಗೂ ಗದ್ದೆಗಳಿಗೆ ಹೋಗಲು ತೊಂದರೆ ಉಂಟಾಗುತ್ತಿದ್ದು, ಶೀಘ್ರವಾಗಿ ನೂತನ ಸೇತುವೆ ನಿರ್ಮಾಣ ಕಾಮಗಾರಿ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲಿಯೇ ಕ್ರಮಕೈಗೊಳ್ಳುವ ಭರವಸೆ ನೀಡಿದರು.

ಬಳಿಕ ಹಂಚಿನ ಸಿದ್ದಾಪುರದ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ”ಗೆ ಭೇಟಿನೀಡಿದ ಸಂದರ್ಭದಲ್ಲಿ ಶಾಲಾ ಮಕ್ಕಳು ಅತ್ಯಂತ ಪ್ರೀತಿಯಿಂದ ಸ್ವಾಗತಿಸಿ. ಶಾಲೆಯು ರಸ್ತೆ ಹೆದ್ದಾರಿ ಪಕ್ಕದಲ್ಲಿರುವುದರಿಂದಾಗಿ ವಾಹನಗಳು ಎಡಬಿಡದೆ ಸಂಚರಿಸುತ್ತಿರುತ್ತವೆ. ಆದ್ದರಿಂದ ಅಪಘಾತ ಸಂಭವಿಸದಂತೆ ಕ್ರಮ ಕೈಗೊಳ್ಳಲು ಮನವಿ ಮೇರೆಗೆ ಅಧಿಕಾರಿಗಳಿಗೆ ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದರು.

ಈ ವೇಳೆ ಜನಪ್ರತಿನಿಧಿಗಳು, ಮುಖಂಡರು, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಶಾಲಾ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.