ನಂದಿನಿ ಹಾಲಿನ ದರ ಹೆಚ್ಚಳ; ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ಮಹತ್ವದ ನಿರ್ಧಾರ ಸಾಧ್ಯತೆ*
*ನಂದಿನಿ ಹಾಲಿನ ದರ ಹೆಚ್ಚಳ; ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ಮಹತ್ವದ ನಿರ್ಧಾರ ಸಾಧ್ಯತೆ*
ನಂದಿನಿ ಹಾಲಿನ ದರ (Nandini milk Prce) ಏರಿಕೆ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ, ಕೆಎಂಫ್ (KMF) ಅಧ್ಯಕ್ಷರು, ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷರ ಜತೆ ಸಭೆ ನಡೆಯಲಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ದರ ಹೆಚ್ಚಿಸಲು ಒಕ್ಕೂಟಗಳು ಈಗಾಗಲೇ ಒತ್ತಾಯಿಸಿದ್ದು, ಈ ವಿಚಾರವಾಗಿ ಸಿಎಂ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಬಳಿಕ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯೂ ಇದೆ.
ಪಶು ಆಹಾರ, ಮೇವು, ಕೂಲಿ ಹಾಗೂ ಇತರ ಖರ್ಚು ವಚ್ಚಗಳು ಹೆಚ್ಚಾಗಿದೆ. ಹೀಗಾಗಿ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿಯಂತೆ ಹೆಚ್ಚಳ ಮಾಡಬೇಕು ಎಂದು ಕರ್ನಾಟಕದ ಎಲ್ಲ ಹಾಲು ಒಕ್ಕೂಟಗಳ ಅಧ್ಯಕ್ಷರು ಪಶುಸಂಗೋಪನೆ ಸಚಿವ ವೆಂಕಟೇಶ್ಗೆ ಮನವಿ ಮಾಡಿದ್ದರು. ಹೀಗಾಗಿ ಹಾಲಿನ ದರ ಹೆಚ್ಚಳ ಪ್ರಸ್ತಾವ ಸಿದ್ಧಪಡಿಸಲಾಗಿತ್ತು. ಆದರೆ, ಈ ಪ್ರಸ್ತಾವನೆಗೆ ಸರ್ಕಾರದಿಂದ ಅನುಮತಿ ದೊರೆಯಬೇಕಿದೆ ಎನ್ನಲಾಗಿದೆ.
“*ಹಾಲಿನ ದರ ಹೆಚ್ಚಳ ಕುರಿತ ಸಭೆಯಲ್ಲಿ ಯಾರೆಲ್ಲ ಭಾಗಿ?*
ಹಾಲಿನ ದರ ಹೆಚ್ಚಳ ಸಂಬಂಧ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಪಶು ಸಂಗೋಪನೆ ಸಚಿವ ವೆಂಕಟೇಶ್, ಸಹಕಾರ ಸಚಿವ ಕೆಎನ್ ರಾಜಣ್ಣ, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ ಶಿವಸ್ವಾಮಿ, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಈ ವೇಳೆ ಹಾಲಿನ ದರ ಹೆಚ್ಚಳ ಸೇರಿ ಹೈನುಗಾರರಿಗೆ ಸಂಬಂಧಿಸಿದ ಇತರ ವಿಷಯಗಳೂ ಚರ್ಚೆಯಾಗಲಿವೆ. ಹಾಲಿನ ದರ ಏರಿಕೆ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯೂ ಇದೆ.