Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 492

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 284

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 284

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 492

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 284

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 284

Warning: ftp_mkdir() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 642

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 492

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 284

ಎನ್. ರವಿಕುಮಾರ್ ಟೆಲೆಕ್ಸ್ ಗೆ ಕಾಸರಗೋಡು ಪತ್ರಕರ್ತರ ಸಂಘದ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ “

ಎನ್. ರವಿಕುಮಾರ್ ಟೆಲೆಕ್ಸ್ ಗೆ ಕಾಸರಗೋಡು ಪತ್ರಕರ್ತರ ಸಂಘದ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ “

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಪ್ರಸಕ್ತ ಸಾಲಿನ ರಾಜ್ಯಮಟ್ಟದ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ ” ಗೆ ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಸಂಪಾದಕರಾದ ಎನ್. ರವಿಕುಮಾರ್ ( ಟೆಲೆಕ್ಸ್ )ಅವರನ್ನು ಆಯ್ಕೆ ಮಾಡಲಾಗಿದೆ.

ಕರ್ನಾಟಕದ ಪತ್ರಿಕೋದ್ಯಮದಲ್ಲಿ ಎನ್ .ರವಿಕುಮಾರ್ ಅವರ ವೃತ್ತಿಪರತೆ, ಸಾಮಾಜಿಕ ಸೌಹಾರ್ದತೆ ಮತ್ತು ವೈಚಾರಿಕತೆಯ ಪ್ರತಿಪಾದನೆಯನ್ನು ಗುರುತಿಸಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘವು, ಈ ವರ್ಷದ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ ” ಗೆ ಎನ್. ರವಿಕುಮಾರ್ ಅವರನ್ನು ಆಯ್ಕೆ ಮಾಡಿದ್ದು,
ಪ್ರಶಸ್ತಿಯು ನಗದು, ಮತ್ತು ಪ್ರಶಸ್ತಿ ಫಲಕ , ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.

ಮೇ.೩ ರಂದು ಸ್ವಾಗತ ಸಮಿತಿ ಅಧ್ಯಕ್ಷರಾದ ಕೆ.ಕೆ ಶೆಟ್ಟಿಕುತ್ತಿಕಾರ್ ಅವರ ಅಧ್ಯಕ್ಷತೆಯಲ್ಲಿ ಕಾಸರಗೋಡಿನ ಸೀತಾಂಗೋಳಿ ಎಲೈನ್ಸ್ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗಡಿನಾಡು ಪ್ರದೇಶಾಭಿವೃದ್ದಿ ಪ್ರಾಧಿಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಪ್ರಶಸ್ತಿಪ್ರದಾನ ಮಾಡಲಾಗುವುದು.

ಕರ್ನಾಟಕ ವಿಧಾನಪರಿಷತ್ತಿನ ಸಭಾಪತಿ ಬಸವರಾಜಹೊರಟ್ಟಿ, ಕೃಷಿ ಸಚಿವ ಚೆಲುವರಾಯಸ್ವಾಮಿ, ಗಡಿ ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ, ಕರ್ನಾಟಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ , ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರುಗಳು ಭಾಗವಹಿಸಲಿದ್ದಾರೆ ಎಂದು ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ರವಿ ನಾಯ್ಕಾಪು ಅವರು ತಿಳಿಸಿದ್ದಾರೆ.

ಎರಡು ದಶಕಗಳಿಂದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘವು ಕೇರಳದಲ್ಲಿ ಜನಮನ್ನಣೆಗೆ ಪಾತ್ರವಾಗಿದ್ದು, ಇಲ್ಲಿನ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಮತ್ತು ಕನ್ನಡ -ಮಲೆಯಾಳಂ ಪತ್ರಕರ್ತರ ನಡುವಿನ ಸ್ನೇಹಸೇತುವಾಗಿ ಕೆಲಸ ಮಾಡುತ್ತಿದೆ.