ಕಾಂತಾರ: ಚಾಪ್ಟರ್ 1’ ಶೂಟ್ ಮುಗಿಸಿ ಬಂದಿದ್ದ ರಾಕೇಶ್ ಪೂಜಾರಿ;* *ರಾತ್ರೋರಾತ್ರಿ ಹೃದಯಾಘಾತ*

*ಕಾಂತಾರ: ಚಾಪ್ಟರ್ 1’ ಶೂಟ್ ಮುಗಿಸಿ ಬಂದಿದ್ದ ರಾಕೇಶ್ ಪೂಜಾರಿ;*

*ರಾತ್ರೋರಾತ್ರಿ ಹೃದಯಾಘಾತ*

ಕಾಮಿಡಿ ಕಿಲಾಡಿಗಳು ಸೀಸನ್ 3’ ಖ್ಯಾತಿಯ ರಾಕೇಶ್ ಪೂಜಾರಿ (Rakesh Poojary) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಇದು ಅವರ ಆಪ್ತರಿಗೆ ಹಾಗೂ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನಾಗಿತ್ತು ಎಂಬುದನ್ನು ರಾಕೇಶ್ ಪೂಜಾರಿ ಅವರ ಆಪ್ತ ಬಳಗದಲ್ಲಿ ಒಬ್ಬರಾದ ನಟ ಗೋವಿಂದೇ ಗೌಡ (ಜಿಜಿ) ವಿವರಿಸಿದ್ದಾರೆ. ಮೇ 11ರ ಬೆಳಿಗ್ಗೆ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ರ ಶೂಟ್​ನಲ್ಲಿ ಅವರು ಇದ್ದರು. ಮಧ್ಯರಾತ್ರಿ ಅವರ ಸಾವು ಸಂಭವಿಸಿದೆ.

ಒಳ್ಳೆಯ ಕಲಾವಿದ ಎನ್ನುವುದಕ್ಕಿಂತ ಒಳ್ಳೆಯ ಮನುಷ್ಯನಾಗಿದ್ದ. ನನಗೂ ಆತ ತುಂಬಾನೇ ಆಪ್ತ. ಎಲ್ಲರ ಪ್ರೀತಿ ಪಾತ್ರ ವ್ಯಕ್ತಿ ಆಗಿದ್ದ. ಪ್ಲೇಟ್​ಲೆಟ್ಸ್ ಕಡಿಮೆ ಇತ್ತು. ಆ ಬಳಿ ಹಾರ್ಟ್​ ಅಟ್ಯಾಕ್ ಆಗಿದೆ. ವಿಷಯ ಕೇಳಿ ತುಂಬಾನೇ ನೋವಾಗುತ್ತಿದೆ. ಇದನ್ನು ನಂಬೋಕೆ ಆಗುತ್ತಿಲ್ಲ’ ಎಂದು ಭಾವುಕರಾಗಿ ಮಾತನಾಡಿದ್ದಾರೆ. ಅವರಿಗೆ ಈ ವಿಚಾರವನ್ನು ಅರಗಿಸಿಕೊಳ್ಳೋಕೆ ಸಾಧ್ಯವೇ ಆಗುತ್ತಿಲ್ಲ.

‘ಬೆಳಿಗ್ಗೆ ಕಾಂತಾರ ಸಿನಿಮಾ ಶೂಟ್​ನಲ್ಲಿ ಇದ್ದ. ಶೂಟ್ ಮುಗಿಸಿ ಸಂಜೆ ಗೆಳೆಯರ ಮದುವೆ ಫಂಕ್ಷನ್​ಗೆ ಹೋಗಿದ್ದಾನೆ. ಸುಸ್ತು ಎನ್ನುತ್ತಿದ್ದ. ಮಧ್ಯರಾತ್ರಿ ಹಾರ್ಟ್​ ಅಟ್ಯಾಕ್ ಆಯ್ತು. ಎಲ್ಲರೂ ನನಗೆ ಕಾಲ್ ಮಾಡಿದ್ದರು. ಆದರೆ ಮೊಬೈಲ್ ಸೈಲೆಂಟ್​ನಲ್ಲಿ ಇದ್ದಿದ್ದರಿಂದ ವಿಷಯ ಗೊತ್ತಾಗಿರಲಿಲ್ಲ. ಬೆಳಿಗ್ಗೆ ಎದ್ದು ನೋಡಿದಾಗ ವಿಷಯ ತಿಳಿಯಿತು’ ಎಂದಿದ್ದಾರೆ ಅವರು ಜಿಜಿ.
(Tv-9 ಕೃಪೆ)