ಮೇ.14ರಂದು ಬೆಳಿಗ್ಗೆ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶ* *ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಟಿ.ಮಂಜುನಾಥ್ ನವುಲೆ ವಿವರಣೆ*
*ಮೇ.14ರಂದು ಬೆಳಿಗ್ಗೆ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶ*
*ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಟಿ.ಮಂಜುನಾಥ್ ನವುಲೆ ವಿವರಣೆ*
ಶಿವಮೊಗ್ಗ : ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಭಾಗವಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ)
ಜಿಲ್ಲಾ ಶಾಖೆ (ಲಕ್ಷ್ಮೀ ನಾರಾಯಣ ನಾಗವಾರ ಬಣ) ವತಿಯಿಂದ ಮೇ 14 ರಂದು ನಗರದಲ್ಲಿ ಸಂಘಟನೆಯ ಕಾರ್ಯಕರ್ತರ ಜಿಲ್ಲಾ ಮಟ್ಟದ ಸಮಾವೇಶ ಆಯೋಜಿಸಲಾಗಿದೆ ಎಂದು ದಸಂಸ ಜಿಲ್ಲಾ ಸಂಚಾಲಕ
ಟಿ. ಮಂಜುನಾಥ್ ನವುಲೆ ತಿಳಿಸಿದ್ದಾರೆ.
ಸೋಮವಾರ ಅವರು ಪತ್ರಿಕಾ ಭವನದಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಿಷ್ಠಗೊಳ್ಳುವುದರ ಜತೆಗೆ ಯುವಕರಲ್ಲಿ ಸಂವಿಧಾನದ ಬಗ್ಗೆ ಅರಿವು ಮೂಡಿಸುವುದರ ಉದ್ದೇಶದೊಂದಿಗೆ ಈ ಸಮಾವೇಶ ಆಯೋಜಿಸಲಾಗಿದೆ ಎಂದರು.
ಮೇ 14 ರಂದು ಬೆಳ್ಳಿಗ್ಗೆ 11 ಗಂಟೆಗೆ ಶಿವಮೊಗ್ಗ ನಗರದ ಬಾಲ ರಾಜ್ ಅರಸ್ ರಸ್ತೆಯಲ್ಲಿರುವ ಜಿಲ್ಲಾ ಭೋವಿ ಭವನದಲ್ಲಿ ಸಮಾವೇಶ ನಡೆಯಲಿದ್ದು, ಶಾಲಾ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ( ಲಕ್ಷ್ಮೀ ನಾರಾಯಣ ನಾಗವಾರ ಬಣ)ಯ ಕಾರ್ಯಕಾರಿ ರಾಜ್ಯ ಸಂಚಾಲಕ ಜೀವನ ಹಳ್ಳಿ ವೆಂಕಟೇಶ್, ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ರವರ ಧರ್ಮ ಪತ್ನಿ ಶ್ರೀಮತಿ ಡಾಳಿ ಜಾನಕಮ್ಮ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಅರಣ್ಯ ಕೈಗಾರಿಕ ನಿಗಮದ ಅಧ್ಯಕ್ಷರಾದ ಹಾಗೂ ಸಾಗರ ಕ್ಷೇತ್ರ ಶಾಸಕರಾದ ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಬಲ್ಮೀಶ್ ಬಾನು, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಎಸ್.ರವಿಕುಮಾರ್, ರಾಜ್ಯ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ., ದಸಂಸ ರಾಜ್ಯ ಸಮಿತಿ ಸದಸ್ಯ ತರೀಕೆರೆ ನಾಗರಾಜಗ, ದಸಂಸ ರಾಜ್ಯ ಮಹಿಳಾಒಕ್ಕೂಟದ ಸಂ. ಸಂಚಾಲಕರಾದ ಮುಖಂಡರಾದ ಪ್ರೇಮ ವಸಂತ್ ಹಾಗೂ ದಸಂಸ ವಿಭಾಗೀಯ ಸಂಘಟನಾ ಸಂಚಾಲಕರಾದ ಉಮಾಶಂಕರ್ ಆಗಮಿಸಲಿದ್ದಾರೆಂದು ತಿಳಿಸಿದರು.
ದಸಂಸ ಬೆಂಗಳೂರು ವಿಭಾಗೀಯ ಸಂಚಾಲಕರಾದ ದೂಗೂರು ಪರಮೇಶ್ವರ್ ಮಾತನಾಡಿ, ಸಮಾವೇಶದ ಅಧ್ಯಕ್ಷತೆಯನ್ನು ಸಂಘಟನೆಯ ಹಿರಿಯರು, ಜಿಲ್ಲಾ ಸಂಚಾಲಕರಾದ ಮಂಜುನಾಥ್ ನವುಲೆ ವಹಿಸಲಿದ್ದಾರೆ. ಜಿಲ್ಲೆಯ ಎಲ್ಲಾ ತಾಲೂಕುಗಳಿಂದ 500 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗ ವಹಿಸಲಿದ್ದಾರೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ಮಂಜುನಾಥ್(ಬಾಬಣ್ಣ), ರಾಜ್ ಕುಮಾರ್ ಇದ್ದರು.