ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮೂವರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ*
*ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮೂವರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ*
ಮಂಗಳೂರು
ರೂ.50,000 ಲಂಚಕ್ಕೆ ಬೇಡಿಕೆ ಇಟ್ಟು ಪಡೆಯುತ್ತಿದ್ದಂತೆಯೇ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ (Deputy Director, Department of Mines and Geology) ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಂಗಳೂರು (Mangaluru) ನಡೆದಿದೆ.
ಲೋಕಾಯುಕ್ತ ಬಲೆಗೆ ಬಿದ್ದ (Lokayukta trap) ಅಧಿಕಾರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಎನ್ನಲಾಗಿದ್ದು, ಜೊತೆಗೆ ಇಬ್ಬರು ಸಿಬ್ಬಂದಿಗಳು ಕೂಡ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ದೂರುದಾರ ಗಣೇಶ ಎಂಬ ವ್ಯಕ್ತಿಯಿಂದ 50,000 ರೂ. ಲಂಚದ (Rs. 50,000 bribe) ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದ್ದಿದ್ದಾರೆ.
ದೂರುದಾರರು ಇರಾ ಗ್ರಾಮದಲ್ಲಿ ಮನೆಯನ್ನು ಕಟ್ಟುವ ಉದ್ದೇಶದಿಂದ ನೆಲಸಮಗೊಳಿಸಲು ಕಟ್ಟಡಕಲ್ಲು (ಲ್ಯಾಟರೈಟ್ ಕಲ್ಲು) ತೆಗೆಯಲು ಅನುಮತಿ ಕೇಳಿದರಂತೆ, ಈ ವೇಳೆ ಅಧಿಕಾರಿಯು ವ್ಯಕ್ತಿಗೆ 50,000ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಇಂದು ಲಂಚದ ಹಣ ಪಡೆಯುತ್ತಿದ್ದ ವೇಳೆಯಲ್ಲೇ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ, ಸಿಬ್ಬಂದಿ ಮತ್ತು ವಾಹನ ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪ್ರಭಾರ ಎಸ್ಪಿ ಕುಮಾರಚಂದ್ರ, ಡಿವೈಎಸ್ಪಿ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ಹಾಗೂ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರಾದ ಮಂಜುನಾಥ, ರಾಜೇಂದ್ರ ನಾಯ್ಕ ಮತ್ತಿತರರು ಭಾಗವಹಿಸಿದ್ದರು.