ಆರ್ಸಿಬಿಗೆ ಐಪಿಎಲ್ ಟ್ರೋಫಿ:* *ಕೊನೆಗೂ ನಮ್ದೇ ಆಯ್ತು ಕಪ್* *ಶಿವಮೊಗ್ಗದ ಗೋಪಿ ಸರ್ಕಲಲ್ಲಿ ಲಾಠಿಚಾರ್ಜ್- ಸಂಭ್ರಮಿಸಲು ಹೋಗಿ ಅಪಘಾತದಲ್ಲಿ ಯುವಕನ ದುರ್ಮರಣ* *ಬೆಂಗಳೂರಿನಲ್ಲಿ ಸಂಭ್ರಮಾಚರಣೆ ವೇಳೆ ಕ್ರೌರ್ಯ, ಯುವಕನಿಗೆ ಚಾಕು ಇರಿತ*
*ಆರ್ಸಿಬಿಗೆ ಐಪಿಎಲ್ ಟ್ರೋಫಿ:*
*ಕೊನೆಗೂ ನಮ್ದೇ ಆಯ್ತು ಕಪ್*
*ಶಿವಮೊಗ್ಗದ ಗೋಪಿ ಸರ್ಕಲಲ್ಲಿ ಲಾಠಿಚಾರ್ಜ್- ಸಂಭ್ರಮಿಸಲು ಹೋಗಿ ಅಪಘಾತದಲ್ಲಿ ಯುವಕನ ದುರ್ಮರಣ*
*ಬೆಂಗಳೂರಿನಲ್ಲಿ ಸಂಭ್ರಮಾಚರಣೆ ವೇಳೆ ಕ್ರೌರ್ಯ, ಯುವಕನಿಗೆ ಚಾಕು ಇರಿತ*
ಆರ್ಸಿಬಿ (RCB) ತಂಡ ಚೊಚ್ಚಲ ಐಪಿಎಲ್ ಟ್ರೋಫಿ (IPL Trophy) ಎತ್ತಿಹಿಡಿದ ಬೆನ್ನಲ್ಲೇ ಬೆಂಗಳೂರು ನಗರದಾದ್ಯಂತ ಸಂಭ್ರಮಾಚರಣೆ ಮುಗಿಲುಮುಟ್ಟಿತು. ಹಲವೆಡೆ ಪಟಾಕಿಗಳನ್ನು ಸಿಡಿಸಿ ಜನ ಸಂಭ್ರಮಿಸಿದರೆ, ಇನ್ನು ಕೆಲವೆಡೆ ರಸ್ತೆಗಳಲ್ಲಿ ಘೋಷಣೆಗಳನ್ನು ಕೂಗುತ್ತಾ ಸಂಭ್ರಮ ಆಚರಿಸಿದರು.
ಈ ಸಂದರ್ಭದಲ್ಲಿ, ಬೆಂಗಳೂರಿನ ಪೀಣ್ಯದ ಜಾಲಹಳ್ಳಿ ಕ್ರಾಸ್ ಬಳಿ ದುಷ್ಕರ್ಮಿಗಳ ಗುಂಪು ಕ್ರೌರ್ಯ ಮೆರೆದಿದೆ. ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿದು ಪರಾರಿಯಾಗಿದೆ.
ಸಂಭ್ರಮಾಚರಣೆ ಮಾಡುತ್ತಾ ದುಷ್ಕರ್ಮಿಗಳು ಬಾರ್ಗೆ ತೆರಳುತ್ತಿದ್ದರು. ಇದೇ ವೇಳೆ, ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ. ಸ್ಥಳದಲ್ಲಿದ್ದವರ ಪ್ರತಿರೋಧದ ಬಳಿಕ ದುಷ್ಕರ್ಮಿಗಳು ಘಟನಾ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಕೂದಲೆಳೆ ಅಂತರದಲ್ಲಿ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹಲ್ಲೆಗೊಳಗಾದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿವಮೊಗ್ಗದಲ್ಲಿ ಎರ್ರಾಬಿರ್ರಿ ಬೈಕ್ ಓಡಿಸಿದ ಪರಿಣಾಮ ಅಪಘಾತವಾಗಿ ರವೀಂದ್ರನಗರ ಗಣಪತಿ ದೇವಸ್ಥಾನದ ಬಳಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಂಭ್ರಾಮಚರಣೆಯಲ್ಲಿ ಮೈಮರೆತ ಗುಂಪುಗಳು ಗೋಪಿ ಸರ್ಕಲಲ್ಲಿ ದಾಂಧಲೆ ಎಬ್ಬಿಸಿದಾಗ ಪೊಲೀಸರು ಮಧ್ಯರಾತ್ರಿ ಲಾಠಿಚಾರ್ಜ್ ಕೂಡ ಮಾಡಿರುವ ಘಟನೆ ವರದಿಯಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದ ಬೆನ್ನಲ್ಲೇ ರಾತ್ರಿಯಿಡೀ ಸಂಭ್ರಮಾಚರಣೆ ನೆರವೇರಿದೆ. ವಿವಿಧೆಡೆ ರಸ್ತೆಗಳಲ್ಲಿ ಘೋಷಣೆ ಕೂಗುತ್ತಾ ಅಭಿಮಾನಿಗಳು ಸಂಭ್ರಮಿಸಿದ್ದಾರೆ.