ಪತ್ರಿಕಾಗೋಷ್ಠಿಯಲ್ಲಿ ಶಾಸಕ ವೈದ್ಯ ಡಾ.ಧನಂಜಯ ಸರ್ಜಿ- ಕಿರಣ್ ಕುಮಾರ್* *ಸೆ.20 ರಂದು ವೈದ್ಯರು-ವೈದ್ಯೋದ್ಯಮಿಗಳು-ವೈದ್ಯಕೀಯ ಕ್ಷೇತ್ರದವರ ಸಮ್ಮೇಳನ*
*ಪತ್ರಿಕಾಗೋಷ್ಠಿಯಲ್ಲಿ ಶಾಸಕ ವೈದ್ಯ ಡಾ.ಧನಂಜಯ ಸರ್ಜಿ- ಕಿರಣ್ ಕುಮಾರ್*
*ಸೆ.20 ರಂದು ವೈದ್ಯರು-ವೈದ್ಯೋದ್ಯಮಿಗಳು-ವೈದ್ಯಕೀಯ ಕ್ಷೇತ್ರದವರ ಸಮ್ಮೇಳನ*
ಕರ್ನಾಟಕ ಹಾಗೂ ಭಾರತದ ಹಲವು ರಾಜ್ಯಗಳಿಂದ ಸುಮಾರು 350 ಕ್ಕಿಂತಲೂ ಹೆಚ್ಚಿನ ವೈದ್ಯರು, ವೈದ್ಯೋದ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರನ್ನು ಒಂದೇ ವೇದಿಕೆಯಲ್ಲಿ ತರುವ ವಿನೂತನ ಕಾರ್ಯಕ್ರಮವೊಂದನ್ನು ಇದೇ ಸೆಪ್ಟೆಂಬರ್ 20ರಂದು ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಶಾಸಕ ವೈದ್ಯ ಡಾ.ಧನಂಜಯ ಸರ್ಜಿ ಮತ್ತು ಅಂತರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ (ILYF) ಯ ಶಿವಮೊಗ್ಗ ಚಾಪ್ಟರ್ ಅಧ್ಯಕ್ಷ ಕೆ.ಕಿರಣ್ ಕುಮಾರ್ ಇಂದು ಜಂಟಿ ಪತ್ರಿಕೋಷ್ಠಿಯಲ್ಲಿ ತಿಳಿಸಿದರು.
ಮರುದಿನ ಅಂದರೆ, ಸೆಪ್ಟೆಂಬರ್ 21 ರಂದು ಸಿಗಂದೂರು ಮತ್ತು ಜೋಗಕ್ಕೆ ನೆಟ್ವರ್ಕಿಂಗ್ ಟ್ರಿಪ್ ಏರ್ಪಡಿಸಲಾಗಿದೆ.
ವೈದ್ಯರು ತಮ್ಮ ಕ್ಲಿನಿಕಲ್ ಪ್ರಾಕ್ಟಿಸ್ ಗಿಂತಲೂ ಮುಂದೆ ಹೋಗಿ ಉದ್ಯಮಿಗಳಾಗಲು, ಹೊಸ ಕಾಲದ ವೈದ್ಯಕೀಯ ಸೇವಾ ಅಗತ್ಯಗಳು ಹಾಗೂ ಆರೋಗ್ಯ ಸೇವೆಗಳಲ್ಲಿ ಬೇಕಾದ ನೂತನ ತಂತ್ರಜ್ಞಾನಗಳನ್ನು ಸಂಶೋಧನೆ ಮಾಡಿ ಹೆಚ್ಚಿನ ಜನರಿಗೆ ಉತ್ತಮ ಗುಣಮಟ್ಟದ ಸೇವೆಗಳನ್ನು ಒದಗಿಸುವಂತೆ ಮಾಡಲು ಹಾಗೂ ತಮ್ಮ ಕ್ಷೇತ್ರದಲ್ಲಿ ಹೊಸ ಎತ್ತರಕ್ಕೆ ಜಿಗಿಯಲು ಈ ಕಾರ್ಯಕ್ರಮ ನೆರವಾಗಲಿದೆ ಎಂದು ಕಿರಣ್ ಕುಮಾರ್ .ಕೆ. ಹೇಳಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಹಲವು ತಾಂತ್ರಿಕ ಹಾಗೂ ಕಾನೂನಾತ್ಮಕ ಅಂಶಗಳನ್ನು ಜಗತ್ತಿನ ಎಲ್ಲೆಡೆಯಿಂದ ಶೋಧಿಸಿ ಕ್ಷಿಪ್ರವಾಗಿ ಒದಗಿಸುವ ಎ ಐ ಒಳನೋಟಗಳು, ಹಾಸ್ಪಿಟಲ್ ವಿಸ್ತರಣೆ, ಸಂಪನ್ಮೂಲ ಕ್ರೋಢೀಕರಣ, ಸಂಪತ್ತಿನ ಸೃಷ್ಟಿ, ಮತ್ತು ನೂತನ ಡಿಜಿಟಲ್ ಹೆಲ್ತ್ ಕೇರ್ ನ ಸಾಧಕ ಬಾಧಕಗಳ ಬಗ್ಗೆ ವಿಶೇಷ ಚರ್ಚೆಗಳಿಗೆ ಈ ಸಮಾವೇಶ ಸಾಕ್ಷಿಯಾಗಲಿದೆ ಎಂದರು.
ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಮತ್ತು ಸ್ಕಿಲ್ ಡೆವಲಪ್ ಮೆಂಟ್ ಖಾತೆಯ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್, ಶಿವಮೊಗ್ಗದ ಸಂಸದರಾದ ಬಿ. ವೈ. ರಾಘವೇಂದ್ರ, ದಾವಣಗೆರೆಯ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ, ಶಾಸಕರು ಚನ್ನಬಸಪ್ಪ ಎಸ್ ಎನ್. ವಿಧಾನ ಪರಿಷತ್ ಶಾಸಕ ಧನಂಜಯ ಸರ್ಜಿ, ಚಿತ್ರದುರ್ಗದ ವಿಧಾನ ಪರಿಷತ್ ಶಾಸಕರ ನವೀನ್ ಕೊಟ್ಟಿಗೆ, iLYF ಟ್ರಸ್ಟ್ ನ ಅಧ್ಯಕ್ಷರು ಸಂತೋಷ್ ಕೆಂಚಾಂಬ ಮತ್ತಿತರರು ಉಪಸ್ಥಿತರಿರುವರು.
ಈ ಸಮಾವೇಶದ ಸಂಯೋಜಕರಾಗಿ ಡಾ. ಶಾಲಿನಿ ನಲ್ವಾಡ್ ( ಕೋ ಫೌಂಡರ್, ICATT, ಏರ್ ಅಂಬುಲೆನ್ಸ್), ಡಾ. ಧನಂಜಯ ಸರ್ಜಿ (MLC & ಸರ್ಜಿ ಗ್ರೂಪ್ ಆಫ್ ಹಾಸ್ಪಿಟಲ್ಸ್) ಹಾಗೂ iLYF ಟ್ರಸ್ಟಿಗಳು ಹಾಗೂ ಸದಸ್ಯರು ಭಾಗವಹಿಸುವರು.
ಡಾ. ನಾಗೇಂದ್ರ ಸ್ವಾಮಿ ( ಚೀಫ್ ಎಕ್ಸಿಕ್ಯೂಟಿವ್ ಆಫೀಸರ್, ರಾಮಯ್ಯ ಮೆಮೋರಿಯಲ್ ಹಾಸ್ಪಿಟಲ್) ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಡಾ. ಧನಂಜಯ್ ಅರೋರ ( ಬ್ರಾಂಡ್ ಮ್ಯಾನೇಜ್ಂಟ್ ಎಲ್ಬರ್ಟ್ & TEDx ಸ್ಪೀಕರ್), ಡಾ. ಸುರೇಶ್ ಬಾಡಮಠ ( ಪ್ರೊಫೆಸರ್ ನಿಮಾನ್ಸ್), ವೈದ್ಯಕೀಯ ಕ್ಷೇತ್ರದಲ್ಲಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಬಹಳಷ್ಟು ಸಾಧನೆ ಮಾಡಿದ ವ್ಯಕ್ತಿಗಳು ಈ ಸಮಿತ್ ನಲ್ಲಿ ವೈದ್ಯಕೀಯ ಸೇವೆಯನ್ನು ವಿಸ್ತರಿಸುವ ಬಗ್ಗೆ, ಆರ್ಥಿಕ ನಿರ್ವಹಣೆ ಬಗ್ಗೆ, ಆಡಳಿತ ದ ಬಗ್ಗೆ, ವೈದ್ಯರುಗಳ ಸಾಂಘಿಕ ವ್ಯವಹಾರ, ಉದ್ಯಮದ ಬಗ್ಗೆ ಮಲ್ಟಿಪಲ್ ಪ್ಯಾನೆಲ್ ಡಿಸ್ಕಶನ್ಸ್ ನಡೆಸಲಿದ್ದಾರೆ ಎಂದರು.
ರವೀಂದ್ರ ಬೆಣ್ಣೆಹಳ್ಳಿ, ರಾಜೇಶ್ ಸುರಗಿಹಳ್ಳಿ ಸೇರಿದಂತೆ ಹಲವರಿದ್ದರು.